ಕರಾವಳಿ

ಬಿ.ಸಿ.ರೋಡಿನಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದ ವಿಚಾರದಲ್ಲಿ ಮೂವರು ಮುಖಂಡರ ವಿರುದ್ಧ ನ್ಯಾಯಾಲಯದಿಂದ ಸಮನ್ಸ್ ಜಾರಿ..!!!

ಬಂಟ್ವಾಳ: ಮಿಲಾದ್ ರ‍್ಯಾಲಿ ವಿಚಾರದಲ್ಲಿ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಹಾಕಿರುವ ಸವಾಲಿಗೆ ಸಂಬಂಧಿಸಿ ಸೆ.16 ರಂದು ಬಿ.ಸಿ.ರೋಡಿನಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದ ವಿಚಾರದಲ್ಲಿ ಮೂವರು ಮುಖಂಡರ ವಿರುದ್ಧ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದೆ.

 


ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ವಿಹಿಂಪ ಮುಖಂಡರಾದ ಶರಣ್ ಪಂಪುವೆಲ್ ಹಾಗೂ ಭರತ್ ಕುಮ್ಡೇಲ್ ವಿರುದ್ಧ ಹಿಂದೆಯೇ ಪ್ರಕರಣ ದಾಖಲಾಗಿತ್ತು. ಅದರ ಮುಂದುವರಿದ ಭಾಗವಾಗಿ ಬಿಜೆಪಿ ಮುಖಂಡರಾದ ವಿಕಾಸ್ ಪುತ್ತೂರು, ಚೆನ್ನಪ್ಪಕೋಟ್ಯಾನ್, ವಿಹಿಂಪ ಪ್ರಮುಖ ಸಚಿನ್ ಮೆಲ್ಕಾರ್ ವಿರುದ್ಧ ಬಂಟ್ವಾಳ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದೆ.

 


ಘಟನೆ ವಿವರ
ಈದ್ ಮಿಲಾದ್ ರ್ಯಾಲಿ ವಿಚಾರಕ್ಕೆ ಸಂಬಂಧಿಸಿದಂತೆ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಅವರು ಸಾಮಾಜಿಕ ಜಾಲತಾಣದ ಮೂಲಕ ಹಿಂದೂ ಸಂಘಟನೆಯ ಪ್ರಮುಖರಾದ ಶರಣ್ ಪಂಪ್ ವೆಲ್ ಅವರಿಗೆ ಸವಾಲನ್ನು ಹಾಕಿದ್ದರು. ಸವಾಲನ್ನು ಸ್ವೀಕರಿಸಿದ ಹಿಂದೂ ಸಂಘಟನೆಗಳು ಸೆ. 16 ರಂದು ಬೆಳಿಗ್ಗೆ ಬಿಸಿರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ಜನಸಂಖ್ಯೆಯ ಮೂಲಕ ಪ್ರತಿಭಟನೆ ನಡೆಸಿದ್ದರು. ಸವಾಲು ಸ್ವೀಕರಿಸಿದ ಶರಣ್ ಪಂಪ್ ವೆಲ್ ಕೂಡ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಜೊತೆಗೆ ಪ್ರತಿಭಟನೆ ಉದ್ದೇಶಿಸಿ ಶರಣ್ ಪಂಪ್ ವೆಲ್ ಅವರು ಭಾಷಣ ಮಾಡಿದ್ದರು.ಭಾಷಣದ ಬಳಿಕ ಕಾರ್ಯಕರ್ತರು ಪೋಲೀಸ್ ಬಿಗಿಬಂದೋಬಸ್ತ್ ಗಾಗಿ ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿಹಾಕಿ‌ಮುನ್ನುಗ್ಗಲು ಯತ್ನಿಸಿದಾಗ ಪೋಲೀಸರು ತಡೆದು ಬಳಿಕ ಪ್ರತಿಭಟನೆ ಶಾಂತರೂಪ ಪಡೆದಿತ್ತು‌.
ಈ ಘಟನೆಗೆ ಸಂಬಂಧಿಸಿದಂತೆ ಕೆಳಗಿನ ಪೇಟೆ ನಿವಾಸಿ ಮಹಮ್ಮದ್ ರಫೀಕ್ ಎಂಬಾತ ಬಂಟ್ವಾಳ ನಗರ ಪೋಲಿಸ್ ಠಾಣೆಗೆ ದೂರು ನೀಡಿದ್ದರು.
ದೂರಿನಲ್ಲಿ ಸೆ.16 ರಂದು ‌ನಡೆದ ಪ್ರತಿಭಟನೆಯಲ್ಲಿ ಶರಣ್ ಪಂಪ್ ವೆಲ್, ಭರತ್ ಕುಮ್ಡೆಲು ಎಂಬವರು ಬಿಸಿರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಮುಸ್ಲಿಂ ಧರ್ಮವನ್ನು ಹಾಗೂ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಎಂಬವರನ್ನು ಉದ್ದೇಶಿಸಿ ಅವ್ಯಾಚ್ಚ ಶಬ್ದಗಳಿಂದ ನಿಂದಿಸಿ ಧರ್ಮವನ್ನು ಅವಹೇಳನ ‌ಮಾಡಿದ್ದಲ್ಲದೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದ ಮೂಲಕ ಪ್ರಸಾರ ಮಾಡಿದ್ದಾರೆ.ಇದರಿಂದ ಎರಡು ‌ಕೋಮುಗಳ ನಡುವೆ ಸಂಘರ್ಷ ಹಾಗೂ ಶಾಂತಿಭಂಗ ಉಂಟುಮಾಡುವ ರೀತಿಯಲ್ಲಿ ಮಾತನಾಡಿದ ಇವರಿಬ್ಬರ ಮೇಲೆ ಪ್ರಕರಣ ದಾಖಲಿಸಿ ಎಂದು ಇದೆ.
ದ್ವೇಷದ ನಡೆ ಖಂಡನೀಯ: ವಿಕಾಶ್ ಪುತ್ತೂರು
‌‌ಬಿಸಿರೋಡಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ
ಪ್ರಚೋದನೆ ಮತ್ತು ಶಾಂತಿ ಕದಡಲು ಉದ್ದೇಶಿಸಿದ್ದ ಶರೀಫನ ಮೇಲೆ ಕೇಸು ದಾಖಲಿಸುವ ಬದಲು, ಹಿಂದೂ ಮುಖಂಡರಾದ ಶರಣ್ ಪಂಪ್ವೆಲ್ ಮೇಲೆ FIR ದಾಖಲಿಸಿದ್ದರು, ಇದೀಗ ಅವರೊಟ್ಟಿಗೆ ಬಿಜೆಪಿ ನಾಯಕರಾದ ವಿಕಾಸ್ ಪುತ್ತೂರು, ಚೆನ್ನಪ್ಪ ಕೋಟ್ಯಾನ್ ಹಾಗು ವಿಶ್ವ ಹಿಂದೂ ಪರಿಷತ್ತಿನ ಸಚಿನ್ ಮೆಲ್ಕಾರ್ ರವರ ಹೆಸರುಗಳನ್ನೂ ಸೇರಿಸಿ, FIR ದಾಖಲಿಸಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದೆ… ದ್ವೇಶ ಮತ್ತು ಟಾರ್ಗೆಟ್ ಮಾಡಿ FIR ದಾಖಲಿಸುತ್ತಿರುವ ಕಾಂಗ್ರೆಸ್ ಸರಕಾರದ ನಡೆ ಖಂಡನೀಯ ಎಂದು ವಿಕಾಶ್ ಪುತ್ತೂರು ಆರೋಪ ಮಾಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

2 days ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

2 days ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

4 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

4 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

4 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

5 days ago