ಬಂಟ್ವಾಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನ ಮೇಲೆ ಕಣಜ ಹುಳಗಳು ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಕಟ್ಟೆ ಎಂಬಲ್ಲಿ ನಡೆದಿದೆ.
ಕಾವಳಕಟ್ಟೆ ನಿವಾಸಿ ಮುಹೀಬ್ ( 25) ಎಂಬವರ ಮೇಲೆ ದಾಳಿಯಾಗಿದೆ.
ಕಾವಳಕಟ್ಟೆಯಿಂದ ಮನೆಯ ಕಡೆ ಒಳಗಿನ ರಸ್ತೆಯ ಮೂಲಕ ಹೋಗುತ್ತಿದ್ದ ಪಾದಾಚಾರಿ ಮುಹೀಬ್ ಅವರಿಗೆ ಕಣಜಹುಳಗಳ ಗುಂಪು ದಾಳಿ ಮಾಡಿದೆ ಎಂದು ಹೇಳಲಾಗಿದೆ.
ದಾಳಿಗೊಳಗಾದ ಅವರನ್ನು ಸ್ಥಳೀಯ ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ , ಗಂಭೀರವಾದ ಸ್ಥಿತಿಯಲ್ಲಿದ್ದ ಕಾರಣ ಅವರನ್ನು 108 ಅಂಬ್ಯುಲೆನ್ಸ್ ಮೂಲಕ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಲೆ ಹಾಗೂ ಇತರ ದೇಹದ ಎಲ್ಲಾ ಕಡೆಗಳಿಗೂ ಕಣಜ ಹುಳಗಳು ದಾಳಿಮಾಡಿದ ಪರಿಣಾಮ ಆರೋಗ್ಯದಲ್ಲಿ ಏರುಪೇರುಗಳು ಕಾಣಬಹುದು ಎಂಬ ನಿಟ್ಟಿನಲ್ಲಿ ಮುಂಜಾಗ್ರತಾ ವೈದ್ಯಕೀಯ ಚಿಕಿತ್ಸೆಗಾಗಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಕಾವಳಕಟ್ಟೆ ಅದೇ ರಸ್ತೆಯಲ್ಲಿ ಇನ್ನೊರ್ವ ಪಾದಾಚಾರಿ ಮೇಲೆ ಕೂಡ ಕಣಜಹುಳಗಳು ದಾಳಿ ಮಾಡಿವೆ ಎಂಬ ಸುದ್ದಿಯಾಗಿದೆಯಾದರೂ ಅವರು ಯಾರು? ಮತ್ತು ಯಾವ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಯಾವುದೇ ಸರಿಯಾದ ಮಾಹಿತಿ ಲಭ್ಯವಾಗಿಲ್ಲ.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…