ಬಂಟ್ವಾಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನ ಮೇಲೆ ಕಣಜ ಹುಳಗಳು ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಕಟ್ಟೆ ಎಂಬಲ್ಲಿ ನಡೆದಿದೆ.
ಕಾವಳಕಟ್ಟೆ ನಿವಾಸಿ ಮುಹೀಬ್ ( 25) ಎಂಬವರ ಮೇಲೆ ದಾಳಿಯಾಗಿದೆ.
ಕಾವಳಕಟ್ಟೆಯಿಂದ ಮನೆಯ ಕಡೆ ಒಳಗಿನ ರಸ್ತೆಯ ಮೂಲಕ ಹೋಗುತ್ತಿದ್ದ ಪಾದಾಚಾರಿ ಮುಹೀಬ್ ಅವರಿಗೆ ಕಣಜಹುಳಗಳ ಗುಂಪು ದಾಳಿ ಮಾಡಿದೆ ಎಂದು ಹೇಳಲಾಗಿದೆ.
ದಾಳಿಗೊಳಗಾದ ಅವರನ್ನು ಸ್ಥಳೀಯ ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ , ಗಂಭೀರವಾದ ಸ್ಥಿತಿಯಲ್ಲಿದ್ದ ಕಾರಣ ಅವರನ್ನು 108 ಅಂಬ್ಯುಲೆನ್ಸ್ ಮೂಲಕ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಲೆ ಹಾಗೂ ಇತರ ದೇಹದ ಎಲ್ಲಾ ಕಡೆಗಳಿಗೂ ಕಣಜ ಹುಳಗಳು ದಾಳಿಮಾಡಿದ ಪರಿಣಾಮ ಆರೋಗ್ಯದಲ್ಲಿ ಏರುಪೇರುಗಳು ಕಾಣಬಹುದು ಎಂಬ ನಿಟ್ಟಿನಲ್ಲಿ ಮುಂಜಾಗ್ರತಾ ವೈದ್ಯಕೀಯ ಚಿಕಿತ್ಸೆಗಾಗಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಕಾವಳಕಟ್ಟೆ ಅದೇ ರಸ್ತೆಯಲ್ಲಿ ಇನ್ನೊರ್ವ ಪಾದಾಚಾರಿ ಮೇಲೆ ಕೂಡ ಕಣಜಹುಳಗಳು ದಾಳಿ ಮಾಡಿವೆ ಎಂಬ ಸುದ್ದಿಯಾಗಿದೆಯಾದರೂ ಅವರು ಯಾರು? ಮತ್ತು ಯಾವ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಯಾವುದೇ ಸರಿಯಾದ ಮಾಹಿತಿ ಲಭ್ಯವಾಗಿಲ್ಲ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…