ಕರ್ನಾಟಕದ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಮಂಜೇಶ್ವರದ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿದೆ.
ದೇವಳದ ರಥಬೀದಿಯಲ್ಲಿ ಸಹಸ್ರಾರು ಭಗವತ್ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮ ನಡೆಯಿತು. ತುಳುನಾಡಿನಲ್ಲಿ ಹಿಂದಿನಿಂದಲೂ ನಾಗ ದೇವರ ಆರಾಧನೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಕೋಟ್ಯಾಂತರ ಭಕ್ತರ ಆರಾಧ್ಯದೈವ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಡನಾಗಿ ಭಕ್ತರಿಗೆ ದರ್ಶನ ನೀಡಿದ್ದು ಲಕ್ಷಾಂತರ ಭಕ್ತರು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.ಮುಂಜಾನೆ ಶ್ರೀ ದೇವಳದಲ್ಲಿ ಪಂಚಾಮೃತ , ಕ್ಷೀರಾಭಿಷೇಕ, ಶತ ಕಲಶಾಭಿಷೇಕ ಗಳು ದೇವಳದಲ್ಲಿ ನೆರವೇರಿದವು . ಬಳಿಕ ಸಾಯಂಕಾಲ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬೆಳ್ಳಿ ಪಲ್ಲಕಿ ಯಲ್ಲಿ ಭುಜ ಸೇವೆಯ ಮೂಲಕ ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು.
ಶನಿವಾರ ಕಾಸರಗೋಡಿನ ಮಂಜೇಶ್ವರದ ಅನಂತೇಶ್ವರ ದೇವಾಲಯದಲ್ಲಿ ಸಾವಿರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಚಂಪಾ ಷಷ್ಠಿ ಆಚರಿಸಿದರು. ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.ದೇವಸ್ಥಾನದ ಎದುರಿನ ರಥಬೀದಿಯಲ್ಲಿ ಅಸಂಖ್ಯಾತ ಭಕ್ತರಿಗೆ ದರ್ಶನ ನೀಡಿದ್ದಾನೆ. ಲಕ್ಷಾಂತರ ಮಂದಿ ಭಕ್ತರು ಸುಬ್ರಹ್ಮಣ್ಯನ ಐತಿಹಾಸಿಕ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದಾರೆ.
ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯಕ್ಕೆ ಮಂಗಳೂರು, ಉಡುಪಿ ,ಕುಂದಾಪುರ , ಪುತ್ತೂರು , ಹಾಸನ, ಮಡಿಕೇರಿ, ಮುಂಬೈ , ಬೆಂಗಳೂರು , ಚೆನೈ ಮುಂತಾದ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…