ಪುತ್ತೂರು :ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಇಂದು ಬೆಳಿಗ್ಗೆ 34 ನೆಕ್ಕಿಲಾಡಿಯಲ್ಲಿ ನಡೆದಿದೆ.
ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರ ಸಾಗಿ ಮನೆಯೊಂದರ ವರಾಂಡಕ್ಕೆ ನುಗ್ಗಿದೆ. ಘಟನೆಯಿಂದ ಮನೆಯ ಆವರಣಗೋಡೆಗೆ ಹಾನಿಯಾಗಿದ್ದು, ಆ್ಯಂಬುಲೆನ್ಸ್ ಮನೆಯ ಗೋಡೆಗೆ ಢಿಕ್ಕಿಯಾಗುವುದು ಸ್ವಲ್ಪದರಲ್ಲೇ ತಪ್ಪಿದೆ. ಈ ಸಂದರ್ಭ ರಸ್ತೆ ಬದಿ ಶಾಲಾ ಮಕ್ಕಳು ನಿಂತಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ. ಕನ್ಯಾಡಿಯ ಸೇವಾ ಭಾರತಿಗೆ ಸೇರಿದ ಆ್ಯಂಬುಲೆನ್ಸ್ ಇದಾಗಿದ್ದು, ಆರೋಗ್ಯ ಶಿಬಿರವೊಂದಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಿಂದ ಆ್ಯಂಬುಲೆನ್ಸ್ ಚಾಲಕ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…