ಬಂಟ್ವಾಳ: ಚಾಲಕ ವೃತ್ತಿ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ಯಾವುದೇ ಸುಳಿವು ಇಲ್ಲದೆ ನಾಪತ್ತೆಯಾಗಿದ್ದು,ಸಂಶಯಕ್ಕೆ ಕಾರಣವಾಗಿದೆ.
ಕಲ್ಲಡ್ಕ ಅಮ್ಟೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪ್ರಕಾಶ್ (40) ನಾಪತ್ತೆಯಾಗಿರುವವರು.
ಕಳೆದ 15 ದಿನಗಳ ಹಿಂದೆಯಷ್ಟೇ ಕಲ್ಲಡ್ಕದ ಅಮ್ಟೂರು ಎಂಬಲ್ಲಿಗೆ ಬಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಅದಕ್ಕೂ ಮೊದಲು ಶಂಭೂರಿನಲ್ಲಿ ವಾಸವಾಗಿದ್ದರು.
ಬಿಸಿರೋಡಿನ ಸೋಮಯಾಜಿ ಇಂಡಸ್ಟ್ರೀಸ್ ಲಿಮಿಟೆಡ್ ಕಂಪೆನಿಯಲ್ಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಇವರು ರಾತ್ರಿ ಸುಮಾರು 7 ಗಂಟೆ ಹೊತ್ತಿಗೆ ಕಲ್ಲಡ್ಕ ಕ್ರೀಡೋತ್ಸವ ಕಾರ್ಯಕ್ರಮಕ್ಕೆ ಹೋಗಿ ಬರುವುದಾಗಿ ಕಂಪೆನಿಯಲ್ಲಿ ಹೇಳಿ ಹೋದವರು ಮನೆಗೆ ಬರದೆ ಕಾಣೆಯಾಗಿದ್ದಾರೆ. ಬಳಿಕ ಅವರ ಮೊಬೈಲ್
ಸ್ವಿಚ್ ಆಪ್ ಆಗಿರುವುದು ಮನೆಯವರಿಗೆ ಭಯಹುಟ್ಟಿಸಿದ್ಧು,ಇವರ ಪತ್ನಿ
ಜಯಶ್ರೀ ಅವರು ಬಂಟ್ವಾಳ ನಗರ ಪೋಲಿಸ್ ಠಾಣೆಗೆ ಹುಡುಕಿಕೊಡುವಂತೆ ದೂರು ನೀಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…