ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನಲ್ಲಿ ಅನ್ಯಕೋಮಿನ ಯುವಕನಿಂದ ಅತ್ಯಾಚಾರ ಆರೋಪ!!

ಯುವತಿಯೋರ್ವಳಿಗೆ ಸಹಾಯ ಮಾಡಲು ಬಂದ ಅನ್ಯಕೋಮಿನ ಯುವಕ ಆಕೆಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನಲ್ಲಿ‌ ನಡೆದಿದೆ.

ಕಳೆದ ಜುಲೈ 21 ರಂದು ಯುವತಿಯ ಕಾರು ಕದ್ರಿಯಲ್ಲಿ ಕೆಟ್ಟು ನಿಂತಿತ್ತು. ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಸವಾರ ಮೊಹಮ್ಮದ್ ಶಫಿನ್ ಕಾರನ್ನ ಸರಿಪಡಿಸಿದ್ದ. ಬಳಿಕ ಆಕೆಯನ್ನ ಅದೇ ಕಾರಿನಲ್ಲಿ ಕೊಡಿಯಾಲ್ ಬೈಲ್‌ನ‌ ಆಕೆಯ ಅಪಾರ್ಟ್ ಮೆಂಟ್ ಗೆ ಬಿಟ್ಟು ಬಂದಿದ್ದು ಈ ವೇಳೆ‌ ಆಕೆಯ ಮೊಬೈಲ್ ನಂಬರ್ ಪಡೆದಿದ್ದ. ಯುವತಿ ಅಪಾರ್ಟ್ ಮೆಂಟ್ ನಲ್ಲಿ ಏಕಾಂಗಿಯಾಗಿದ್ದು ಆಗಸ್ಟ್ 1 ರಂದು ಯುವತಿಯ ಮನೆಯ ಫ್ರಿಡ್ಜ್ ಕೆಟ್ಟು ಹೋಗಿದ್ದು ಸಹಾಯಕ್ಕಾಗಿ ಶಫಿನ್ ಗೆ ಕರೆ ಮಾಡಿದ್ದಳು.


ಆತ ರಿಪೇರಿಯವರನ್ನು ಕರೆಸಿ ರಿಪೇರಿ ಮಾಡಿಸಿ ಕಳುಹಿಸಿದ್ದಾನೆ. ಬಳಿಕ ಆಕೆಗೆ ಹಣ್ಣು ಹಾಗೂ ಜ್ಯೂಸ್ ನೀಡಿದ್ದ, ಅದರಲ್ಲಿ ಮತ್ತು ಬರಿಸೋ ವಸ್ತು ಬೆರಸಿದ್ದರಿಂದ ಆಕೆ ಪ್ರಜ್ಞೆ ತಪ್ಪಿದ್ದಳು. ಬಳಿಕ ಆತ ದೈಹಿಕ ಸಂಪರ್ಕ ಬೆಳೆಸಿ,ವೀಡಿಯೋ ಮಾಡಿ ಮುಂದೆಯೂ ಸಹಕಾರ ನೀಡಬೇಕು,ಇಲ್ಲದಿದ್ದಲ್ಲಿ ವೀಡಿಯೋ ವೈರಲ್ ಮಾಡೋ ಬೆದರಿಕೆ ಹಾಕಿದ್ದ. ಬಳಿಕ ಆತನ ಅಣ್ಣ ಮೊಹಮ್ಮದ್ ಶಿಯಾಬ್ ಎಂಬಾತನೂ ಮನೆಗೆ ಬಂದು ಅತ್ಯಾಚಾರಕ್ಕೆ ಯತ್ನಿಸಿದ್ದ,ಅಂದು ಆಕೆ ತಪ್ಪಿಸಿಕೊಂಡಿದ್ದು ಮನೆಯಲ್ಲಿದ್ದ 62 ಸಾವಿರ ರೂಪಾಯಿ ಕಳವು ಮಾಡಿದ್ದ. ಬಳಿಕ ಇಬ್ಬರೂ ಸಹೋದರರು ವಿದೇಶಕ್ಕೆ ಪರಾರಿಯಾಗಿದ್ದರು. ಇದೀಗ ಯುವತಿ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!