ಬಾಲಕಿಯ ಜೀವ ಹಿಂಡಿದ ಜೋಕಾಲಿ

ಬುಡೋಳಿ : ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಮಗುವಿನ ಕುತ್ತಿಗೆಗೆ ಹಗ್ಗ ಸುತ್ತಿ ಜೀವ ಕಳೆದುಕೊಂಡ ಹೃದಯ ಹಿಂಡುವ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಡಿ.8 ರಂದು ಸಂಜೆ ನಡೆದಿದೆ. ಬುಡೋಳಿ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಮೃತ ಬಾಲಕಿ ಎಂದು ಗುರ್ತಿಸಲಾಗಿದೆ.
ಶೇರಾ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 3ನೇ ತರಗತಿಯ ವಿದ್ಯಾರ್ಥಿನಿ ತೀರ್ಥಶ್ರೀ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದುಕೊಂಡಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.



