ಬಂಟ್ವಾಳ ತಾಲೂಕಿನ ಮಂಚಿ- ಕೊಳ್ಳಾಡು ಸರಕಾರಿ ಪ್ರೌಢಶಾಲೆಯಲ್ಲಿ ಜನವರಿ 4 ಹಾಗೂ 5 ರಂದು ನಡೆಯುವ 23ನೇ ಬಂಟ್ವಾಳ ತಾಲುಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಭಾನುವಾರ ಶಾಲೆಯಲ್ಲಿ ನಡೆದ ಸ್ವಾಗತ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.
ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ನಾಳ ಮಾತನಾಡಿ, ಹಿರಿಯ ಸಾಹಿತಿಗಳ, ಪ್ರತಿಭಾನ್ವಿತ ಯುವ ಬರಹಗಾರರ, ಸಾಹಿತ್ಯ ಪ್ರಿಯರೆಲ್ಲರ ಸಾಹಿತ್ಯ ಜಾತ್ರೆಯಾಗಿ 23ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೆರುಗು ನೀಡಲಿದ್ದು, ಕನ್ನಡ ಭಾಷೆಯ ಕೃಷಿಗೆ ಇನ್ನಷ್ಟು ಹೊಸ ರೂಪ ಹೊಸ ಚಿಂತನೆಗಳನ್ನು ಹುಟ್ಟು ಹಾಕುವ ‘ಸಾಹಿತ್ಯದಿಂದ ಸಾಮರಸ್ಯ’ ಎನ್ನುವ ಆಶಯದಡಿ ಈ ಸಮ್ಮೇಳನ ನಡೆಯಲಿದೆ ಎಂದರು.
ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಸತೀಶ್ ಆಳ್ವ ಇರಾ ಬಾಳಿಕೆ ಮಾತನಾಡಿ, ಗ್ರಾಮಾಂತರ ಮಂಚಿ ಪ್ರದೇಶವು ಹಲವಾರು ಸಾಹಿತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದೆ. ಮಂಚಿಯ ಇಬ್ಬರು ಸಾಹಿತಿಗಳು ಈಗಾಗಲೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಿಕೊಂಡಿರುವುದು ಆಯೋಜನೆ ಮಾಡುತ್ತಿರುವ ನಮಗೆ ಹೆಮ್ಮೆಯ ಸಂಗತಿ. ಮಂಚಿ-ಕೊಳ್ಳಾಡು ಪ್ರೌಢಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಈ ಬಾರಿಯ ಸಮ್ಮೇಳನ ಯಶಸ್ವಿಯಾಗಿ ಮೂಡಿ ಬರಲಿ ಎಂದು ಹಾರೈಸಿದರು.
ಹಿರಿಯ ಸಾಹಿತಿ ಹಾಗೂ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಪಡಾರು ಮಹಾಬಲೇಶ್ವರ ಭಟ್ ಶುಭ ಹಾರೈಸಿದರು. ಶಾಲಾ ಹಿರಿಯ ವಿದ್ಯಾರ್ಥಿ ಮಾಧವ ಮಾವೆ, ಅಬ್ದುಲ್ ರಝಾಕ್ ಅನಿಸಿಕೆ ವ್ಯಕ್ತಪಡಿಸಿದರು.
ಬಂಟ್ವಾಳ ತಾಲೂಕು ಘಟಕದ ಪದಾಧಿಕಾರಿಗಳಾದ ವಿ ಸು ಭಟ್, ಅಬೂಬಕ್ಕರ್ ಅಮ್ಮುಂಜಿ, ಮಹಮ್ಮದ್ ಪಾಣೆಮಂಗಳೂರು, ಗಣೇಶ ಪ್ರಸಾದ ಪಾಂಡೆಲು, ಸಮಿತಿ ಕೋಶಾಧಿಕಾರಿ ಹಾಜಿ ಸುಲೈಮಾನ್ ಸುರಿಬೈಲು, ಸಂಚಾಲಕರಾದ ಉಮಾನಾಥ ರೈ ಮೇರಾವು, ಬಿ ಎಂ ಅಬ್ಬಾಸ್ ಆಲಿ, ಪುಷ್ಪರಾಜ ಕುಕ್ಕಾಜೆ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಸುಶೀಲ ವಿಟ್ಲ ಮೊದಲಾದವರು ಭಾಗವಹಿಸಿದ್ದರು.
ಸ್ವಾಗತ ಸಮಿತಿಯ ಪ್ರಧಾನ ಸಂಯೋಜಕ ರಾಮ್ ಪ್ರಸಾದ್ ರೈ ತಿರುವಾಜೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಎಂ ಡಿ ಮಂಚಿ ವಂದಿಸಿದರು. ಬಂಟ್ವಾಳ ತಾಲೂಕು ಘಟಕದ ಗೌರವ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…