ಬಂಟ್ವಾಳ ತಾಲೂಕಿನ ಮಂಚಿ- ಕೊಳ್ಳಾಡು ಸರಕಾರಿ ಪ್ರೌಢಶಾಲೆಯಲ್ಲಿ ಜನವರಿ 4 ಹಾಗೂ 5 ರಂದು ನಡೆಯುವ 23ನೇ ಬಂಟ್ವಾಳ ತಾಲುಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಭಾನುವಾರ ಶಾಲೆಯಲ್ಲಿ ನಡೆದ ಸ್ವಾಗತ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.
ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ನಾಳ ಮಾತನಾಡಿ, ಹಿರಿಯ ಸಾಹಿತಿಗಳ, ಪ್ರತಿಭಾನ್ವಿತ ಯುವ ಬರಹಗಾರರ, ಸಾಹಿತ್ಯ ಪ್ರಿಯರೆಲ್ಲರ ಸಾಹಿತ್ಯ ಜಾತ್ರೆಯಾಗಿ 23ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೆರುಗು ನೀಡಲಿದ್ದು, ಕನ್ನಡ ಭಾಷೆಯ ಕೃಷಿಗೆ ಇನ್ನಷ್ಟು ಹೊಸ ರೂಪ ಹೊಸ ಚಿಂತನೆಗಳನ್ನು ಹುಟ್ಟು ಹಾಕುವ ‘ಸಾಹಿತ್ಯದಿಂದ ಸಾಮರಸ್ಯ’ ಎನ್ನುವ ಆಶಯದಡಿ ಈ ಸಮ್ಮೇಳನ ನಡೆಯಲಿದೆ ಎಂದರು.
ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಸತೀಶ್ ಆಳ್ವ ಇರಾ ಬಾಳಿಕೆ ಮಾತನಾಡಿ, ಗ್ರಾಮಾಂತರ ಮಂಚಿ ಪ್ರದೇಶವು ಹಲವಾರು ಸಾಹಿತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದೆ. ಮಂಚಿಯ ಇಬ್ಬರು ಸಾಹಿತಿಗಳು ಈಗಾಗಲೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಿಕೊಂಡಿರುವುದು ಆಯೋಜನೆ ಮಾಡುತ್ತಿರುವ ನಮಗೆ ಹೆಮ್ಮೆಯ ಸಂಗತಿ. ಮಂಚಿ-ಕೊಳ್ಳಾಡು ಪ್ರೌಢಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಈ ಬಾರಿಯ ಸಮ್ಮೇಳನ ಯಶಸ್ವಿಯಾಗಿ ಮೂಡಿ ಬರಲಿ ಎಂದು ಹಾರೈಸಿದರು.
ಹಿರಿಯ ಸಾಹಿತಿ ಹಾಗೂ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಪಡಾರು ಮಹಾಬಲೇಶ್ವರ ಭಟ್ ಶುಭ ಹಾರೈಸಿದರು. ಶಾಲಾ ಹಿರಿಯ ವಿದ್ಯಾರ್ಥಿ ಮಾಧವ ಮಾವೆ, ಅಬ್ದುಲ್ ರಝಾಕ್ ಅನಿಸಿಕೆ ವ್ಯಕ್ತಪಡಿಸಿದರು.
ಬಂಟ್ವಾಳ ತಾಲೂಕು ಘಟಕದ ಪದಾಧಿಕಾರಿಗಳಾದ ವಿ ಸು ಭಟ್, ಅಬೂಬಕ್ಕರ್ ಅಮ್ಮುಂಜಿ, ಮಹಮ್ಮದ್ ಪಾಣೆಮಂಗಳೂರು, ಗಣೇಶ ಪ್ರಸಾದ ಪಾಂಡೆಲು, ಸಮಿತಿ ಕೋಶಾಧಿಕಾರಿ ಹಾಜಿ ಸುಲೈಮಾನ್ ಸುರಿಬೈಲು, ಸಂಚಾಲಕರಾದ ಉಮಾನಾಥ ರೈ ಮೇರಾವು, ಬಿ ಎಂ ಅಬ್ಬಾಸ್ ಆಲಿ, ಪುಷ್ಪರಾಜ ಕುಕ್ಕಾಜೆ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಸುಶೀಲ ವಿಟ್ಲ ಮೊದಲಾದವರು ಭಾಗವಹಿಸಿದ್ದರು.
ಸ್ವಾಗತ ಸಮಿತಿಯ ಪ್ರಧಾನ ಸಂಯೋಜಕ ರಾಮ್ ಪ್ರಸಾದ್ ರೈ ತಿರುವಾಜೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಎಂ ಡಿ ಮಂಚಿ ವಂದಿಸಿದರು. ಬಂಟ್ವಾಳ ತಾಲೂಕು ಘಟಕದ ಗೌರವ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…