ತಾನು ಶಾಸಕನಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನದಲ್ಲಿ ಭಾಗಿಯಾದ ದಿನದಂದು ಆ ಸವಿನೆನಪಿಗೋಸ್ಕರ ಸುವರ್ಣ ಸೌಧದ ಬಳಿ ಗಿಡವೊಂದನ್ನು ನೆಟ್ಟಿದ್ದು ಆ ಗಿಡವನ್ನು ಒಂದು ವರ್ಷದ ಬಳಿಕ ವಿಕ್ಷಣೆ ಮಾಡಿದ ಮತ್ತೂರು ಶಾಸಕ ಅಶೋಕ್ ರೈ ಅವರು ಅದಕ್ಕೆ ಗೊಬ್ಬರ ಹಾಕಿ ನೀರು ಹಾಕುವ ಮೂಲಕ ತಮ್ಮ ಪರಿಸರ ಪ್ರೇಮವನ್ನು ಮೆರೆದಿದ್ದಾರೆ.
ಪರಿಸರ ಹಾಗೂ ಅದರಲ್ಲೂ ವಿಶೇಷವಾಗಿ ಪಲವಸ್ತುಗಳ ಗಿಡವನ್ನು ಕಡಿಯಬಾರದು ಅವುಗಳನ್ನು ನೆಟ್ಟು ಪೋಷಣೆ ಮಾಡಬೇಕು ಎಂದು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ತಿಂಗಳಲ್ಲೇ ತನ್ನ ಕ್ಷೇತ್ರದ ಜನತೆಗೆ ಮನವಿ ಮಾಡಿದ್ದರು. ಕಳೆದ ಮಳೆಗಾಲದಲ್ಲಿ ಪುತ್ತೂರು ಉಪ್ಪಿನಂಗಡಿ ರಸ್ತೆಯ ಇಕ್ಕೆಲಗಳಲ್ಲಿ ಕಾಟು ಮಾವು ಹಾಗೂ ಹಲಸಿನ ಗಿಡವನ್ನು ನಾಟಿ ಮಾಡಿಸಿದ್ದರು. ರಸ್ತೆ ಬದಿಯಲ್ಲಿರುವ ಕಾಟುಮಾವು, ಹಲಸಿನ ಗಿಡವನ್ನು ಯಾವುದೇ ಕಾರಣಕ್ಕೂ ಕಡಿಯಬಾರದು ಮತು ಕಾಟು ಮಾವು ಆಗುವ ಸಂದರ್ಭದಲ್ಲಿ ಮಾವಿನ ಮಿಡಿಗಾಗಿ ಮರವನ್ನು ಏಲಂ ಕರೆಯದಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಶಾಸಕನಾಗಿ ಆಯ್ಕೆಯಾದ ಬಳಿಕ ಸುವರ್ಣ ಸೌಧದಲ್ಲಿ ನಡೆದ ಅಶೋಕ್ ರೈ ಅವರ ಮೊದಲ ಅಧಿವೇಶನದ ನೆನಪಿಗಾಗಿ ಸೌಧದ ಪಕ್ಕದಲ್ಲೇ ಹಲಸಿನ ಗಿಡವನ್ನು ನೆಟ್ಟಿದ್ದರು. ಮಂಗಳವಾರದಂದು ಗಿಡವನ್ನು ಪರಿಶೀಲನೆ ಮಾಡಿದ ಶಾಸಕರು ಗಿಡಕ್ಕೆ ಗೊಬ್ಬರ ಹಾಗೂ ನೀರು ಹಾಕಿದ್ದಾರೆ ಇವರ ಜೊತೆ ಅಧಿಕಾರಿಗಳೂ ಉಪಸ್ಥಿತರಿದ್ದರು.
ಕೋಟ್
ಸುವರ್ಣ ಸೌಧದಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ಭಾಗವಹಿಸಿದ ಸವಿನೆನಪಿಗೋಸ್ಕರ ಸೌಧದ ಬಳಿ ಹಲಸಿನ ಗಿಡವೊಂದನ್ನು ನೆಟ್ಟಿದ್ದೆ. ಗಿಡ ನೆಟ್ಟು ಒಂದು ವರ್ಷದ ಬಳಿಕ ಅದ ನ್ನು ಪರಿಶೀಲನೆ ಮಾಡಿದೆ, ಗಿಡ ಚೆನ್ನಾಗಿ ಬೆಳೆದಿದೆ. ಅದಕ್ಕೆ ಗೊಬ್ಬರ ಮತ್ತು ನೀರು ಹಾಕಿ ಪೋಷಣೆ ಮಾಡುವಂತೆ ಸೂಚಿಸಿದ್ದೇನೆ. ಆ ಮರ ಬೆಳೆದು ದೊಡ್ಡದಾದರೆ ಅದುವೇ ನನಗೆ ದೊಡ್ಡ ಸಂತೋಷ, ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿಯೂ ಮುಂದಿನ ದಿನಗಳಲ್ಲಿ ಗಿಡ ನೆಡುವ ಅಭಿಯಾನ ಆರಂಭಿಸಿ ರಸ್ತೆ ಬದಿಯಲ್ಲಿ ಖಾಲಿ ಇರುವ ಜಾಗದಲ್ಲಿ ಫಲವಸ್ತು ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದೇನೆ ಇದಕ್ಕಾಗಿ ಪರಿಸರ ಪ್ರೇಮಿ ಸಾರ್ವಜನಿಕ ಸಂಪೂರ್ಣ ಸಹಕಾರವನ್ನು ಬೇಡುತ್ತಿದ್ದೇನೆ.
ಅಶೋಕ್ ರೈ ಶಾಸಕರು,ಪುತ್ತೂರು ವಿಧಾನಸಭಾ ಕ್ಷೇತ್ರ
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…