ಜನ ಮನದ ನಾಡಿ ಮಿಡಿತ

Advertisement

ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ 36 ನೇ ವಾರ್ಷಿಕ ಮಹಾಸಭೆ

ಬಂಟ್ವಾಳ: ಆಟೋ ರಿಕ್ಷಾ ಚಾಲಕ ಮಾಲಕರ ಸಂಘ ( ಬಿ.ಎಂ.ಎಸ್. ಬಂಟ್ವಾಳ ತಾಲೂಕು ಮೋಟಾರ್ & ಜನರಲ್ ಮಜ್ದೂರ್ ಸಂಘ ದ.ಕ.ಇದರ ಘಟಕ) ಇದರ 36 ನೇ ವಾರ್ಷಿಕ ಮಹಾಸಭೆ ಲಯನ್ಸ್ ಸೇವಾ ಮಂದಿರದಲ್ಲಿ ಬಂಟ್ವಾಳ ತಾಲೂಕು ಸಂಘದ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಾಲೂಕಿನ ರಿಕ್ಷಾ ಚಾಲಕರಿಗೆ ಅನ್ಯಾಯವಾದರೆ, ಯಾವುದೇ ಸಮಸ್ಯೆಗಳಾದ ಸಂದರ್ಭದಲ್ಲಿ ನನ್ನನ್ನು ಸಂಪರ್ಕಿಸಿ, ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಅವರು ಮಾತನಾಡಿ,ರಿಕ್ಷಾ ಚಾಲಕರ ಶ್ರೇಯೋಭಿವೃದ್ದಿಗಾಗಿ ರಚನೆ ಮಂಡಳಿ ಮೂಲಕ ಉಪಯೋಗವನ್ನು ಪಡೆಯುವ ಮೂಲಕ ಬದುಕು ಹಸನಾಗಿಸಿ ಎಂದು ತಿಳಿಸಿದರು.
ಸಂಘಟನೆ ಮೂಲಕ ಉತ್ತಮ ಕಾರ್ಯಕ್ರಮಗಳಿಗೆ ಇನ್ನಷ್ಟು ಪ್ರೇರಣೆ ನೀಡಲಿ ಎಂದು ಹೇಳಿದರು.
ಚಾಲಕರ ಬದುಕಿನ ಜೊತೆಗೆ ದೇಶದ ಚಿಂತನೆಯ ಮೂಲಕ ಸಮಾಜದಲ್ಲಿ ಜೀವಿಸುವ ಎಂದು ತಿಳಿಸಿದರು.
ಸಂಘದ ಕಾನೂನು ಸಲಹೆಗಾರ ನ್ಯಾಯವಾದಿ ಜಯರಾಮ ರೈ ಮಾತನಾಡಿ, ಸಂಘಟನೆಯ ಬಗ್ಗೆ, ಪ್ರೀತಿ, ಭರವಸೆ, ವಿಶ್ವಾಸ,ನಂಬಿಕೆಯನ್ನು ಬೆಳೆಸಿಕೊಂಡರೆ ತಾನು ಬೆಳೆಯುವುದರ ಜೊತೆಗೆ ಸಂಘಟನೆಯು ಬೆಳೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಣ್ಣಿನ ವೈದ್ಯರಾದ ಡಾ.ಮರೀಟ ಅವರು ರಿಕ್ಷಾ ಚಾಲಕರಿಗೆ ಆರೋಗ್ಯ ಮಾಹಿತಿ ನೀಡಿದರು.

ಜಿಲ್ಲಾ ಕಾರ್ಯದರ್ಶಿ ಗೋಪಾಲಕೃಷ್ಣ, ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮಣಿಹಳ್ಳ, ಪುತ್ತೂರು ಅದ್ಯಕ್ಷ ರಾಜೇಶ್ ಮರೀಲು, ಸುಳ್ಯ ಅಧ್ಯಕ್ಷ ರಾಧಾಕೃಷ್ಣ ಸುಳ್ಯ, ಬೆಳ್ತಂಗಡಿ ಅಧ್ಯಕ್ಷ ಕೃಷ್ಣ ಬೆಳಾಲು, ಮೂಡುಬಿದಿರೆ ಅಧ್ಯಕ್ಷ ದೀಪಕ್ ರಾಜ್, ಬಂಟ್ವಾಳ ತಾಲೂಕಿನ
ಸಂಘಟನಾ ಕಾರ್ಯದರ್ಶಿ ಕೃಷ್ಣ ಕುಮಾರ್ ಬಂಟ್ವಾಳ ಉಪಸ್ಥಿತರಿದ್ದರು.
ತಾಲೂಕಿನ‌ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನೆಲ್ಯಡ್ಕ ವಾರ್ಷಿಕ ವರದಿ ವಾಚಿಸಿದರು.
ಜಿಲ್ಲಾ ಉಪಾಧ್ಯಕ್ಷ ನಾರಾಯಣ ಪೂಜಾರಿ ಸ್ವಾಗತಿಸಿದರು. ಆನಂದ ಶೆಟ್ಟಿ ವಂದಿಸಿದರು.
ಉಮಾಶಂಕರ್ ಬಡ್ಡಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!