ಬಂಟ್ವಾಳ: ಆಟೋ ರಿಕ್ಷಾ ಚಾಲಕ ಮಾಲಕರ ಸಂಘ ( ಬಿ.ಎಂ.ಎಸ್. ಬಂಟ್ವಾಳ ತಾಲೂಕು ಮೋಟಾರ್ & ಜನರಲ್ ಮಜ್ದೂರ್ ಸಂಘ ದ.ಕ.ಇದರ ಘಟಕ) ಇದರ 36 ನೇ ವಾರ್ಷಿಕ ಮಹಾಸಭೆ ಲಯನ್ಸ್ ಸೇವಾ ಮಂದಿರದಲ್ಲಿ ಬಂಟ್ವಾಳ ತಾಲೂಕು ಸಂಘದ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಾಲೂಕಿನ ರಿಕ್ಷಾ ಚಾಲಕರಿಗೆ ಅನ್ಯಾಯವಾದರೆ, ಯಾವುದೇ ಸಮಸ್ಯೆಗಳಾದ ಸಂದರ್ಭದಲ್ಲಿ ನನ್ನನ್ನು ಸಂಪರ್ಕಿಸಿ, ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಅವರು ಮಾತನಾಡಿ,ರಿಕ್ಷಾ ಚಾಲಕರ ಶ್ರೇಯೋಭಿವೃದ್ದಿಗಾಗಿ ರಚನೆ ಮಂಡಳಿ ಮೂಲಕ ಉಪಯೋಗವನ್ನು ಪಡೆಯುವ ಮೂಲಕ ಬದುಕು ಹಸನಾಗಿಸಿ ಎಂದು ತಿಳಿಸಿದರು.
ಸಂಘಟನೆ ಮೂಲಕ ಉತ್ತಮ ಕಾರ್ಯಕ್ರಮಗಳಿಗೆ ಇನ್ನಷ್ಟು ಪ್ರೇರಣೆ ನೀಡಲಿ ಎಂದು ಹೇಳಿದರು.
ಚಾಲಕರ ಬದುಕಿನ ಜೊತೆಗೆ ದೇಶದ ಚಿಂತನೆಯ ಮೂಲಕ ಸಮಾಜದಲ್ಲಿ ಜೀವಿಸುವ ಎಂದು ತಿಳಿಸಿದರು.
ಸಂಘದ ಕಾನೂನು ಸಲಹೆಗಾರ ನ್ಯಾಯವಾದಿ ಜಯರಾಮ ರೈ ಮಾತನಾಡಿ, ಸಂಘಟನೆಯ ಬಗ್ಗೆ, ಪ್ರೀತಿ, ಭರವಸೆ, ವಿಶ್ವಾಸ,ನಂಬಿಕೆಯನ್ನು ಬೆಳೆಸಿಕೊಂಡರೆ ತಾನು ಬೆಳೆಯುವುದರ ಜೊತೆಗೆ ಸಂಘಟನೆಯು ಬೆಳೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಣ್ಣಿನ ವೈದ್ಯರಾದ ಡಾ.ಮರೀಟ ಅವರು ರಿಕ್ಷಾ ಚಾಲಕರಿಗೆ ಆರೋಗ್ಯ ಮಾಹಿತಿ ನೀಡಿದರು.
ಜಿಲ್ಲಾ ಕಾರ್ಯದರ್ಶಿ ಗೋಪಾಲಕೃಷ್ಣ, ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮಣಿಹಳ್ಳ, ಪುತ್ತೂರು ಅದ್ಯಕ್ಷ ರಾಜೇಶ್ ಮರೀಲು, ಸುಳ್ಯ ಅಧ್ಯಕ್ಷ ರಾಧಾಕೃಷ್ಣ ಸುಳ್ಯ, ಬೆಳ್ತಂಗಡಿ ಅಧ್ಯಕ್ಷ ಕೃಷ್ಣ ಬೆಳಾಲು, ಮೂಡುಬಿದಿರೆ ಅಧ್ಯಕ್ಷ ದೀಪಕ್ ರಾಜ್, ಬಂಟ್ವಾಳ ತಾಲೂಕಿನ
ಸಂಘಟನಾ ಕಾರ್ಯದರ್ಶಿ ಕೃಷ್ಣ ಕುಮಾರ್ ಬಂಟ್ವಾಳ ಉಪಸ್ಥಿತರಿದ್ದರು.
ತಾಲೂಕಿನ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನೆಲ್ಯಡ್ಕ ವಾರ್ಷಿಕ ವರದಿ ವಾಚಿಸಿದರು.
ಜಿಲ್ಲಾ ಉಪಾಧ್ಯಕ್ಷ ನಾರಾಯಣ ಪೂಜಾರಿ ಸ್ವಾಗತಿಸಿದರು. ಆನಂದ ಶೆಟ್ಟಿ ವಂದಿಸಿದರು.
ಉಮಾಶಂಕರ್ ಬಡ್ಡಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…