ಮುಲ್ಕಿ: ಕಿನ್ನಿಗೋಳಿಯಲ್ಲಿ ಪಟ್ಲ ಫೌಂಡೇಶನ್ ಘಟಕ ಸ್ಥಾಪಿಸುವ ಬಗ್ಗೆ ಕಿನ್ನಿಗೋಳಿಯ “ಸಮೃದ್ಧಿ ಹೊಟೇಲ್ ಸಭಾಂಗಣ”ದಲ್ಲಿ ಪ್ರಮುಖರ ಸಭೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಲ ಫೌಂಡೇಶನ್ ಅಧ್ಯಕ್ಷ ಸತೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕಸಾಪ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು , ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ,
ಪಟ್ಲ ಫೌಂಡೇಶನ್ ಮುಂಬೈ ಘಟಕದ ಅಧ್ಯಕ್ಷ ಹಾಗೂ ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಜಾಗತಿಕ ಬಂಟರ ಸಂಘದ ಒಕ್ಕೂಟದ ಉಪಾಧ್ಯಕ್ಷ ಕರ್ನೀರೆ ವಿಶ್ವನಾಥ ಶೆಟ್ಟಿ
ಪಟ್ಲ ಫೌಂಡೇಶನ್ ಎಕ್ಕಾರು ಘಟಕದ ಅಧ್ಯಕ್ಷ ಉದ್ಯಮಿ ಗಿರೀಶ್ ಶೆಟ್ಟಿ ಕಟೀಲು, ಮತ್ತಿತರರು ಉಪಸ್ಥಿತರಿದ್ದರು
ಸಭೆಯಲ್ಲಿ ಕಿನ್ನಿಗೋಳಿ ವಲಯ ಪಟ್ಲ ಫೌಂಡೇಶನ್ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ, ಸರ್ವಾನುಮತದಿಂದ ಆಯ್ಕೆಯಾದರು ಉಳಿದಂತೆ ಪದಾಧಿಕಾರಿಗಳ ಆಯ್ಕೆ ನಡೆಯಿತು
ಹಾಗೂ
ಯಕ್ಷಗಾನ , ಬಹುಮುಖ ಪ್ರತಿಭೆ ಕಾವ್ಯ ಉಲ್ಲಂಜೆ ರವರಿಗೆ ಯಕ್ಷದ್ರುವ ಪಟ್ಲ ಫೌಂಡೇಶನ್ ವತಿಯಿಂದ ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ಹಸ್ತಾಂತರಿಸಲಾಯಿತು
ಪತ್ರಕರ್ತ ಶರತ್ ಶೆಟ್ಟಿ ಸಂಕಲಕರಿಯ ನಿರೂಪಿಸಿದರು ಸಾಯಿನಾಥ ಶೆಟ್ಟಿ ಧನ್ಯವಾದ ಅರ್ಪಿಸಿದರು



