ಉಳ್ಳಾಲ: ವಾಟ್ಸಪ್ ಮತ್ತು ಟೆಲಿಗ್ರಾಂ ಲಿಂಕ್ ಮೂಲಕ ಕೆಲಸದ ಆಮಿಷ ತೋರಿಸಿ ಆನ್ಲೈನ್ ಮುಖೇನ ಕೊಣಾಜೆ ನಿವಾಸಿಯಿಂದ ಹಣ ಪಡೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಜಮ್ಮು ಕಾಶ್ಮೀರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಗಳೂರಿನ ಜಲಸಂದ್ರ ನಿವಾಸಿ ಅಮೀರ್ ಸುಹೇಲ್ ಹಾಗೂ ಕಾಶ್ಮೀರ ನಿವಾಸಿ ಸುಹೈಲ್ ಅಹ್ಮದ್ ವಾನಿ ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳು 2024ರ ಜು.21 ರಂದು ಪಾರ್ಟ್ ಟೈಮ್ ಜಾಬ್ ಕುರಿತು ವಾಟ್ಸಪ್ ಮತ್ತು ಟೆಲಿಗ್ರಾಂ ಲಿಂಕ್ ಕಳುಹಿಸಿದ್ದರು. ಕೆಲಸ ಏನೆಂದು ಕೇಳಿದ ತಕ್ಷಣ ವೀಡಿಯೋ ಕಳುಹಿಸಿ ಅದರ ಸ್ಕ್ರೀನ್ ಶಾಟ್ ಕಳುಹಿಸಲು ತಿಳಿಸಿ ಅವರಿಗೆ ರೂ.130 ನ್ನು ಪಾವತಿಸಿದ್ದಾರೆ. ನಂತರ ಮತ್ತೆ ಹಾಕಿದ ವೀಡಿಯೋ ತಪ್ಪಾಗಿದೆ ಎಂದು ಹೇಳಿ ಇನ್ನೊಂದು ಲಿಂಕ್ ಕಳುಹಿಸಿದ್ದಾರೆ. ಆ ಲಿಂಕ್ ಓಪನ್ ಮಾಡಿದ ತಕ್ಷಣ ರೂ.1000 ಮೊತ್ತವನ್ನು ಹಾಕಲು ಹೇಳಿ ನಂತರ ಹಂತ ಹಂತವಾಗಿ ಅಕೌಂಟಿನಿಂದ ಬೇರೆ ಬೇರೆ ಖಾತೆಗಳಿಗೆ ಹಣವನ್ನು ವರ್ಗಾಯಿಸಿ ಒಟ್ಟು ರೂ. 28,18,065 ವಂಚನೆ ನಡೆಸಿದ್ದರು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯ ಐಟಿ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧ ಈಗಾಗಲೇ ಬೆಂಗಳೂರು, ಮೈಸೂರು ಮೂಲದ 5 ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರು ವಿಚಾರಣೆ ವೇಳೆ ಬಂಧಿತರಿಬ್ಬರ ಮಾಹಿತಿ ನೀಡಿದ್ದರು. ಇಬ್ಬರು ಆರೋಪಿಗಳು ಹಲವು ಬ್ಯಾಂಕುಗಳಲ್ಲಿ ಬೇರೆಯವರ ಹೆಸರಿನಲ್ಲಿ ಮತ್ತು ತಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ಮಾಡಿಸಿರುವುದು ವಿಚಾರಣೆಯಲ್ಲಿ ತಿಳಿದುಬಂದಿದೆ. ಅಲ್ಲದೆ ಬೇರೆಯವರ ಖಾತೆಗೆ ದಿನಕ್ಕೆ 3,000 ದಿಂದ 4,000 ರೂ. ದಷ್ಟು ಹಣ ನೀಡಿ ಬೇರೆ ಬೇರೆ ಕಡೆಗಳಲ್ಲಿ ಅಕೌಂಟ್ ಮಾಡಿಸಿರುವುದು ತಿಳಿದುಬಂದಿದೆ.
ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ನಿರ್ದೇಶನದಂತೆ ಕೊಣಾಜೆ ಠಾಣಾ ನಿರೀಕ್ಷಕ ರಾಜೇಂದ್ರ ಬಿ ಹಾಗೂ ಪಿಎಸ್ ಐಗಳಾದ ಪುನೀತ್ ಗಾಂವ್ಕರ್, ನಾಗರಾಜ್, ಎಎಸ್ ಐ ಪ್ರವೀಣ್ ಹಾಗೂ ಸಿಬ್ಬಂದಿಯಾದ ರೇಷ್ಮಾ, ರಾಮ ನಾಯ್ಕ, ಬಸವನ ಗೌಡ, ದರ್ಶನ್, ಸುರೇಶ್ , ಮುತ್ತು, ಓಗೇನರ್ ಮತ್ತು ಸಂತೋಷ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…