ಉಳ್ಳಾಲ: ವಾಟ್ಸಪ್ ಮತ್ತು ಟೆಲಿಗ್ರಾಂ ಲಿಂಕ್ ಮೂಲಕ ಕೆಲಸದ ಆಮಿಷ ತೋರಿಸಿ ಆನ್ಲೈನ್ ಮುಖೇನ ಕೊಣಾಜೆ ನಿವಾಸಿಯಿಂದ ಹಣ ಪಡೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಜಮ್ಮು ಕಾಶ್ಮೀರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಗಳೂರಿನ ಜಲಸಂದ್ರ ನಿವಾಸಿ ಅಮೀರ್ ಸುಹೇಲ್ ಹಾಗೂ ಕಾಶ್ಮೀರ ನಿವಾಸಿ ಸುಹೈಲ್ ಅಹ್ಮದ್ ವಾನಿ ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳು 2024ರ ಜು.21 ರಂದು ಪಾರ್ಟ್ ಟೈಮ್ ಜಾಬ್ ಕುರಿತು ವಾಟ್ಸಪ್ ಮತ್ತು ಟೆಲಿಗ್ರಾಂ ಲಿಂಕ್ ಕಳುಹಿಸಿದ್ದರು. ಕೆಲಸ ಏನೆಂದು ಕೇಳಿದ ತಕ್ಷಣ ವೀಡಿಯೋ ಕಳುಹಿಸಿ ಅದರ ಸ್ಕ್ರೀನ್ ಶಾಟ್ ಕಳುಹಿಸಲು ತಿಳಿಸಿ ಅವರಿಗೆ ರೂ.130 ನ್ನು ಪಾವತಿಸಿದ್ದಾರೆ. ನಂತರ ಮತ್ತೆ ಹಾಕಿದ ವೀಡಿಯೋ ತಪ್ಪಾಗಿದೆ ಎಂದು ಹೇಳಿ ಇನ್ನೊಂದು ಲಿಂಕ್ ಕಳುಹಿಸಿದ್ದಾರೆ. ಆ ಲಿಂಕ್ ಓಪನ್ ಮಾಡಿದ ತಕ್ಷಣ ರೂ.1000 ಮೊತ್ತವನ್ನು ಹಾಕಲು ಹೇಳಿ ನಂತರ ಹಂತ ಹಂತವಾಗಿ ಅಕೌಂಟಿನಿಂದ ಬೇರೆ ಬೇರೆ ಖಾತೆಗಳಿಗೆ ಹಣವನ್ನು ವರ್ಗಾಯಿಸಿ ಒಟ್ಟು ರೂ. 28,18,065 ವಂಚನೆ ನಡೆಸಿದ್ದರು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯ ಐಟಿ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧ ಈಗಾಗಲೇ ಬೆಂಗಳೂರು, ಮೈಸೂರು ಮೂಲದ 5 ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರು ವಿಚಾರಣೆ ವೇಳೆ ಬಂಧಿತರಿಬ್ಬರ ಮಾಹಿತಿ ನೀಡಿದ್ದರು. ಇಬ್ಬರು ಆರೋಪಿಗಳು ಹಲವು ಬ್ಯಾಂಕುಗಳಲ್ಲಿ ಬೇರೆಯವರ ಹೆಸರಿನಲ್ಲಿ ಮತ್ತು ತಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ಮಾಡಿಸಿರುವುದು ವಿಚಾರಣೆಯಲ್ಲಿ ತಿಳಿದುಬಂದಿದೆ. ಅಲ್ಲದೆ ಬೇರೆಯವರ ಖಾತೆಗೆ ದಿನಕ್ಕೆ 3,000 ದಿಂದ 4,000 ರೂ. ದಷ್ಟು ಹಣ ನೀಡಿ ಬೇರೆ ಬೇರೆ ಕಡೆಗಳಲ್ಲಿ ಅಕೌಂಟ್ ಮಾಡಿಸಿರುವುದು ತಿಳಿದುಬಂದಿದೆ.
ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ನಿರ್ದೇಶನದಂತೆ ಕೊಣಾಜೆ ಠಾಣಾ ನಿರೀಕ್ಷಕ ರಾಜೇಂದ್ರ ಬಿ ಹಾಗೂ ಪಿಎಸ್ ಐಗಳಾದ ಪುನೀತ್ ಗಾಂವ್ಕರ್, ನಾಗರಾಜ್, ಎಎಸ್ ಐ ಪ್ರವೀಣ್ ಹಾಗೂ ಸಿಬ್ಬಂದಿಯಾದ ರೇಷ್ಮಾ, ರಾಮ ನಾಯ್ಕ, ಬಸವನ ಗೌಡ, ದರ್ಶನ್, ಸುರೇಶ್ , ಮುತ್ತು, ಓಗೇನರ್ ಮತ್ತು ಸಂತೋಷ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…