ಜನ ಮನದ ನಾಡಿ ಮಿಡಿತ

Advertisement

ಚಿನ್ನದ ಪದಕ ವಿಜೇತ ಪುತ್ತೂರಿನ ಕ್ರೀಡಾಪಟು ಕುಮಾರಿ ಜಿ.ಎಂ. ಕೀರ್ತಿ ಗೆ 

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ತಾಲೂಕಿನ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಜಿ.ಎಂ. ಕೀರ್ತಿ ಬಿನ್. ಮೊನಪ್ಪ, ಇವರು ಪ್ರಸ್ತುತ ಶೈಕ್ಷಣಿಕ ವರ್ಷದ 67ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದಿಂದ 14 ರ ವಯೋಮಾನದ ಎತ್ತರ ಜಿಗಿತ ವಿಭಾಗದಲ್ಲಿ ಭಾಗವಹಿಸಿದ ಕರ್ನಾಟಕಕ್ಕೆ ಚಿನ್ನದ ಪದಕ ಪಡೆದ ರಾಜ್ಯಕ್ಕೆ ಹೆಸರು ತಂದಿರುತ್ತಾರೆ ಹಾಗೂ ಈ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಪಡೆದಂತಹ ಏಕೈಕ ಪದಕವಾಗಿರುತ್ತದೆ. ಈ ಕ್ರೀಡಾಪಟುವಿನ ಸಾಧನೆಯನ್ನು ಗುರುತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಲಕ್ಷ ಸಹಾಯಧನವನ್ನು ಘೋಷಣೆ ಮಾಡಿರುತ್ತಾರೆ.

 

ವಿದ್ಯಾರ್ಥಿನಿಯು ತೀರಾ ಹಿಂದುಳಿದ ಕುಟುಂಬದವರಾಗಿದ್ದು, ಈ ಸಾಧನೆಗೆ ಮತ್ತು ಮುಂದೇ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳಲು ಅಭ್ಯಾಸ ನಡೆಸಲು ಹಾಗೂ ಇವರ ಮುಂದಿನ ಕ್ರೀಡಾಕ್ಷೇತ್ರದ ಉಜ್ವಲ ಭವಿಷ್ಯಕ್ಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕನೆರವಿನ ಹಸ್ತವನ್ನು ನೀಡಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಯನ್ನು ಮೆಚ್ಚಿದ್ದ ಶಾಸಕ ಅಶೋಕ್ ರೈ ಅವರು ವಿದ್ಯಾರ್ಥಿನಿ ಮನೆಗೆ ತೆರಳಿ ಅಭಿನಂದಿಸಿದ್ದರು. ಮನೆಗೆ ತೆರಳಿದ ವೇಳೆ ಆಕೆಯ ಸಂಕಷ್ಟವನ್ನು ಅರಿತ ಶಾಸಕರು ನಸರಕಾರದಿಂದ ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದರು. ಶಾಸಕರ ಪತ್ರವನ್ನು ಪರಿಗಣಿಸಿದ ಸರಕಾರ ಈ ನಗದನ್ನು ಘೋಷಣೆ ಮಾಡಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!