ಜನ ಮನದ ನಾಡಿ ಮಿಡಿತ

Advertisement

ಚಿನ್ನದ ಪದಕ ವಿಜೇತ ಪುತ್ತೂರಿನ ಕ್ರೀಡಾಪಟು ಕುಮಾರಿ ಜಿ.ಎಂ. ಕೀರ್ತಿ ಗೆ 

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ತಾಲೂಕಿನ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಜಿ.ಎಂ. ಕೀರ್ತಿ ಬಿನ್. ಮೊನಪ್ಪ, ಇವರು ಪ್ರಸ್ತುತ ಶೈಕ್ಷಣಿಕ ವರ್ಷದ 67ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದಿಂದ 14 ರ ವಯೋಮಾನದ ಎತ್ತರ ಜಿಗಿತ ವಿಭಾಗದಲ್ಲಿ ಭಾಗವಹಿಸಿದ ಕರ್ನಾಟಕಕ್ಕೆ ಚಿನ್ನದ ಪದಕ ಪಡೆದ ರಾಜ್ಯಕ್ಕೆ ಹೆಸರು ತಂದಿರುತ್ತಾರೆ ಹಾಗೂ ಈ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಪಡೆದಂತಹ ಏಕೈಕ ಪದಕವಾಗಿರುತ್ತದೆ. ಈ ಕ್ರೀಡಾಪಟುವಿನ ಸಾಧನೆಯನ್ನು ಗುರುತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಲಕ್ಷ ಸಹಾಯಧನವನ್ನು ಘೋಷಣೆ ಮಾಡಿರುತ್ತಾರೆ.

 

ವಿದ್ಯಾರ್ಥಿನಿಯು ತೀರಾ ಹಿಂದುಳಿದ ಕುಟುಂಬದವರಾಗಿದ್ದು, ಈ ಸಾಧನೆಗೆ ಮತ್ತು ಮುಂದೇ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳಲು ಅಭ್ಯಾಸ ನಡೆಸಲು ಹಾಗೂ ಇವರ ಮುಂದಿನ ಕ್ರೀಡಾಕ್ಷೇತ್ರದ ಉಜ್ವಲ ಭವಿಷ್ಯಕ್ಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕನೆರವಿನ ಹಸ್ತವನ್ನು ನೀಡಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಯನ್ನು ಮೆಚ್ಚಿದ್ದ ಶಾಸಕ ಅಶೋಕ್ ರೈ ಅವರು ವಿದ್ಯಾರ್ಥಿನಿ ಮನೆಗೆ ತೆರಳಿ ಅಭಿನಂದಿಸಿದ್ದರು. ಮನೆಗೆ ತೆರಳಿದ ವೇಳೆ ಆಕೆಯ ಸಂಕಷ್ಟವನ್ನು ಅರಿತ ಶಾಸಕರು ನಸರಕಾರದಿಂದ ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದರು. ಶಾಸಕರ ಪತ್ರವನ್ನು ಪರಿಗಣಿಸಿದ ಸರಕಾರ ಈ ನಗದನ್ನು ಘೋಷಣೆ ಮಾಡಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!