ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ತಾಲೂಕಿನ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಜಿ.ಎಂ. ಕೀರ್ತಿ ಬಿನ್. ಮೊನಪ್ಪ, ಇವರು ಪ್ರಸ್ತುತ ಶೈಕ್ಷಣಿಕ ವರ್ಷದ 67ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದಿಂದ 14 ರ ವಯೋಮಾನದ ಎತ್ತರ ಜಿಗಿತ ವಿಭಾಗದಲ್ಲಿ ಭಾಗವಹಿಸಿದ ಕರ್ನಾಟಕಕ್ಕೆ ಚಿನ್ನದ ಪದಕ ಪಡೆದ ರಾಜ್ಯಕ್ಕೆ ಹೆಸರು ತಂದಿರುತ್ತಾರೆ ಹಾಗೂ ಈ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಪಡೆದಂತಹ ಏಕೈಕ ಪದಕವಾಗಿರುತ್ತದೆ. ಈ ಕ್ರೀಡಾಪಟುವಿನ ಸಾಧನೆಯನ್ನು ಗುರುತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಲಕ್ಷ ಸಹಾಯಧನವನ್ನು ಘೋಷಣೆ ಮಾಡಿರುತ್ತಾರೆ.
ವಿದ್ಯಾರ್ಥಿನಿಯು ತೀರಾ ಹಿಂದುಳಿದ ಕುಟುಂಬದವರಾಗಿದ್ದು, ಈ ಸಾಧನೆಗೆ ಮತ್ತು ಮುಂದೇ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳಲು ಅಭ್ಯಾಸ ನಡೆಸಲು ಹಾಗೂ ಇವರ ಮುಂದಿನ ಕ್ರೀಡಾಕ್ಷೇತ್ರದ ಉಜ್ವಲ ಭವಿಷ್ಯಕ್ಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕನೆರವಿನ ಹಸ್ತವನ್ನು ನೀಡಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಯನ್ನು ಮೆಚ್ಚಿದ್ದ ಶಾಸಕ ಅಶೋಕ್ ರೈ ಅವರು ವಿದ್ಯಾರ್ಥಿನಿ ಮನೆಗೆ ತೆರಳಿ ಅಭಿನಂದಿಸಿದ್ದರು. ಮನೆಗೆ ತೆರಳಿದ ವೇಳೆ ಆಕೆಯ ಸಂಕಷ್ಟವನ್ನು ಅರಿತ ಶಾಸಕರು ನಸರಕಾರದಿಂದ ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದರು. ಶಾಸಕರ ಪತ್ರವನ್ನು ಪರಿಗಣಿಸಿದ ಸರಕಾರ ಈ ನಗದನ್ನು ಘೋಷಣೆ ಮಾಡಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…