ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ತಾಲೂಕಿನ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಜಿ.ಎಂ. ಕೀರ್ತಿ ಬಿನ್. ಮೊನಪ್ಪ, ಇವರು ಪ್ರಸ್ತುತ ಶೈಕ್ಷಣಿಕ ವರ್ಷದ 67ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದಿಂದ 14 ರ ವಯೋಮಾನದ ಎತ್ತರ ಜಿಗಿತ ವಿಭಾಗದಲ್ಲಿ ಭಾಗವಹಿಸಿದ ಕರ್ನಾಟಕಕ್ಕೆ ಚಿನ್ನದ ಪದಕ ಪಡೆದ ರಾಜ್ಯಕ್ಕೆ ಹೆಸರು ತಂದಿರುತ್ತಾರೆ ಹಾಗೂ ಈ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಪಡೆದಂತಹ ಏಕೈಕ ಪದಕವಾಗಿರುತ್ತದೆ. ಈ ಕ್ರೀಡಾಪಟುವಿನ ಸಾಧನೆಯನ್ನು ಗುರುತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಲಕ್ಷ ಸಹಾಯಧನವನ್ನು ಘೋಷಣೆ ಮಾಡಿರುತ್ತಾರೆ.
ವಿದ್ಯಾರ್ಥಿನಿಯು ತೀರಾ ಹಿಂದುಳಿದ ಕುಟುಂಬದವರಾಗಿದ್ದು, ಈ ಸಾಧನೆಗೆ ಮತ್ತು ಮುಂದೇ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳಲು ಅಭ್ಯಾಸ ನಡೆಸಲು ಹಾಗೂ ಇವರ ಮುಂದಿನ ಕ್ರೀಡಾಕ್ಷೇತ್ರದ ಉಜ್ವಲ ಭವಿಷ್ಯಕ್ಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕನೆರವಿನ ಹಸ್ತವನ್ನು ನೀಡಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಯನ್ನು ಮೆಚ್ಚಿದ್ದ ಶಾಸಕ ಅಶೋಕ್ ರೈ ಅವರು ವಿದ್ಯಾರ್ಥಿನಿ ಮನೆಗೆ ತೆರಳಿ ಅಭಿನಂದಿಸಿದ್ದರು. ಮನೆಗೆ ತೆರಳಿದ ವೇಳೆ ಆಕೆಯ ಸಂಕಷ್ಟವನ್ನು ಅರಿತ ಶಾಸಕರು ನಸರಕಾರದಿಂದ ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದರು. ಶಾಸಕರ ಪತ್ರವನ್ನು ಪರಿಗಣಿಸಿದ ಸರಕಾರ ಈ ನಗದನ್ನು ಘೋಷಣೆ ಮಾಡಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…