ಡಿಸೆಂಬರ್ 12ರ ನಂತರ ಮತ್ತೊಂದು ಹೊಸ ಚಂಡಮಾರುತದ ಆರ್ಭಟ ಶುರುವಾಗುವ ಭಯ ಕಾಡ್ತಿದೆ. ಪರಿಣಾಮ ಕರ್ನಾಟಕ, ತಮಿಳುನಾಡು, ಶ್ರೀಲಂಕಾದಲ್ಲಿ ಭಾರಿ ಮಳೆ ಬರುತ್ತೆ, ಅಂತಾ ಹವಾಮಾನ ಇಲಾಖೆಯು ಇದೀಗ ವಾರ್ನಿಂಗ್ ಕೊಟ್ಟಿದೆ.

ಕರ್ನಾಟಕದ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ & ಉತ್ತರ ಕನ್ನಡ ಜಿಲ್ಲೆಗಳಲ್ಲು ಮಳೆ ಅಬ್ಬರಿಸುವ ಮುನ್ನೆಚ್ಚರಿಕೆ ನೀಡಲಾಗಿದೆ. ಇದರ ಜೊತೆ ಹಾಸನ ಸೇರಿ ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆ ಅಬ್ಬರ ಜೋರಾಗಿ ಇರಲಿದೆ. ಚಿಕ್ಕಬಳ್ಳಾಪುರ & ಕೋಲಾರ ಜಿಲ್ಲೆಗೂ ಮಳೆಯ ಮೋಡಗಳು ಅಪ್ಪಳಿಸಲಿವೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.



