ಕೊಳವೆ ಬಾವಿಗೆ ಬಿದ್ದ ಬಾಲಕ; ಕಳೆದ 48 ಗಂಟೆಗಳಿಂದ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ
ಜೈಪುರ: ರಾಜಸ್ಥಾನದ ಕಾಲಿಖಾಡ್ ಗ್ರಾಮದಲ್ಲಿ ಸೋಮವಾರ ಸಂಜೆ 3 ಗಂಟೆ ಸುಮಾರಿಗೆ ಆಟವಾಡುವಾಗ ಕೊಳವೆಬಾವಿಗೆ ಮಗು ಬಿದ್ದ ಘಟನೆ ನಡೆದಿದೆ. ಘಟನೆ ನಡೆದ ತಾಸುಗಳ ಒಳಗಾಗಿ ಕಾರ್ಯಾಚರಣೆ ಶುರುವಾಗಿದೆ. 5 ವರ್ಷದ ಮಗು ಆರ್ಯನ್ ನನ್ನು ರಕ್ಷಿಸುವ ಕಾರ್ಯಾಚರಣೆಯನ್ನು NDRF ಪಡೆ ಸತತ 48 ಗಂಟೆಗಳಿಂದ ಮಾಡುತ್ತಿದೆ.
150 ಅಡಿಗಳಷ್ಟು ಆಳವಿರುವ ಕೊಳವೆಬಾವಿಗೆ ಮಗು ಬಿದ್ದಿದ್ದು, ಈಗಾಗಲೇ 110 ಅಡಿಗಳಷ್ಟು ಆಳವನ್ನು ಕೊರೆದಾಗಿದ್ದು, ಇನ್ನು 40 ಅಡಿಗಳಷ್ಟು ಬಾಕಿ ಇದೆ. ಡ್ರಿಲ್ಲಿಂಗ್ ಮೂಲಕ ಮುಂದಿನ ಹಂತವನ್ನು ಕೂಡ ಕೊರೆಯಲಾಗುವುದು. ಆಳದಲ್ಲಿ ಮಣ್ಣು ತೇವಯುತವಾಗಿರುವುದರಿಂದ ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಸಾಧ್ಯವಾಗುತ್ತಿಲ್ಲ. ಕೊಳವೆ ಬಾವಿಯ ಸಮಾಂತರವಾಗಿ ಅಗೆಯಲಾಗುತ್ತಿದ್ದು, ಒಂದು ವೇಳೆ ಮಗು 150 ಅಡಿಗಿಂತ ಆಳದಲ್ಲಿದ್ದರೆ ಮಗುವಿನ ರಕ್ಷಣೆ ಕಷ್ಟಸಾಧ್ಯ ಎಂದು NDRF ಮಾಹಿತಿ ನೀಡಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…