ಕಾಸರಗೋಡು :ವಿವಿಧ ಸಂಘಟನೆಗಳ ಪದಾಧಿಕಾರಿಯಾಗಿ, ವಿಶ್ವ ಸಾಹಿತ್ಯ ಬಳಗದ ಸಂಚಾಲಕಿಯಾಗಿ, ಸಾಹಿತ್ಯ, ಸಾಮಾಜಿಕ ಸೇವಾ ಧರ್ಮವನ್ನು ನಿರಂತರತೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
ಕನ್ನಡ ಭವನದ “ರಜತ ಸಂಭ್ರಮ “ವರ್ಷವಾದ 2025.ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡಪರ ಕಾರ್ಯಕ್ರಮ ಹಾಗೂ “ಮನೆಗೊಂದು ಗ್ರಂಥಾಲಯ,-ಪುಸ್ತಕ ಸತ್ಯ -ಪುಸ್ತಕ ನಿತ್ಯ, ಜನಜಾಗೃತಿ ಮೂಡಿಸುವ ಸಲುವಾಗಿ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಕಾಸರಗೋಡು ಕನ್ನಡ ಭವನದ ನಿರ್ದೇಶಕರಾದ ಡಾ. ಕೊಲಚಪ್ಪೆ ಗೋವಿಂದ ಭಟ್ ನಾಮನಿರ್ದೇಶನ ಮಾಡಿದರು. ಕನ್ನಡ ಭವನದಲ್ಲಿ ಗೌರವ ಅಧ್ಯಕ್ಷರಾದ ಹಿರಿಯ ಪತ್ರಕರ್ತ ಪ್ರದೀಪ್ ಬೇಕಲ್ ಅನುಮೋದಿಸಿದರು. ಸರ್ವಾನುಮತಿಯಿಂದ ಆಯ್ಕೆಯಾದ ಶ್ರಿಮತಿ ರೇಖಾ ಸುದೇಶ್ ರಾವ್ ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ ಉಚಿತ ವಸತಿ ಸೌಕರ್ಯ, ಕನ್ನಡ ಭವನ “ರಜತ ಸಂಭ್ರಮ “2025ಈ ಮೇಲಿನ ಕಾರ್ಯಕ್ರಮ ಸಂಯೋಜನೆಯ ಜವಾಬ್ದಾರಿ ಸ್ವೀಕರಿಸಿ, ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯ ಪ್ರವರಿತ್ತರಾಗಬೇಕೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ ವಾಮನ್ ರಾವ್ ಬೇಕಲ್ ಹಾಗೂ ಕೋಶಧಿಕಾರಿ ಸಂದ್ಯಾ ರಾಣಿ ಟೀಚರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…