ಉಳ್ಳಾಲ : ಸೋಮೇಶ್ವರ ರುದ್ರಪಾದೆಯಿಂದ ಮದ್ಯಾಹ್ನ ವೇಳೆ ಹಾರಿದ ಮಂಗಳೂರಿನ ಪಡೀಲು ,ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತದೇಹ ಸಮೀಪದ ಅಲಿಮಕಲ್ಲು ಎಂಬಲ್ಲಿ ಸಂಜೆ ಹೊತ್ತಿಗೆ ಪತ್ತೆಯಾಗಿದೆ.
ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ ಬಿಡಿಭಾಗಗಳ ಮಾರಾಟದ ಅಂಗಡಿ ಹೊಂದಿರುವ ಅವರು ಮಧ್ಯಾಹ್ನ ಸೋಮೇಶ್ವರ ಸಮುದ್ರ ತೀರಕ್ಕೆ ಬಂದವರು ದ್ವಿಚಕ್ರ ವಾಹನ ಸಹಿತ ತನ್ನ ಬಳಿಯಿದ್ದ ಸೊತ್ತುಗಳನ್ನೆಲ್ಲಾ ಮೇಲಿಟ್ಟು ಸಮುದ್ರಕ್ಕೆ ಹಾರಿದ್ದಾರೆ. ಸಮುದ್ರ ತೀರದಲ್ಲಿದ್ದ ಯುವಕನೋರ್ವ ಸೊತ್ತುಗಳನ್ನು ಕಂಡು ಸಮೀಪದ ಅಂಗಡಿಯವರಲ್ಲಿ ನೀಡಿದ್ದಾರೆ. ಅವರು ಉಳ್ಳಾಲ ಪೊಲೀಸರಿಗೆ ನೀಡಿದ ಮಾಹಿತಿ ನಂತರ, ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸೇರಿದಂತೆ ಸ್ಥಳೀಯ ಈಜುಗಾರರು ಸಮುದ್ರದಲ್ಲಿ ಉದಯ್ ಗಾಗಿ ಟಯರ್ ಟ್ಯೂಬ್ ಬಳಸಿ ಶೋಧ ನಡೆಸಿದ್ದಾರೆ. ಸಂಜೆ ವೇಳೆ ಮೃತದೇಹ ಪತ್ತೆಯಾಗಿದ್ದು, ಮೃತರು ತಂದೆ, ತಾಯಿ, ಪತ್ನಿ, ಒರ್ವ ಪುತ್ರನನ್ನು ಅಗಲಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…