ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ.
ಮಂಗಳೂರು ಕಣ್ಣೂರು ಗಾಣದಬೆಟ್ಟು ನಿವಾಸಿ ಅಜರುದ್ದೀನ್ ಬಂಧಿತ ಆರೋಪಿ.
2009 ರಲ್ಲಿ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪತಿಪತ್ನಿ ಕಲಹದ ಆರೋಪಿಯಾಗಿದ್ದ ಈತ ನ್ಯಾಯಾಲಯಕ್ಕೆ ವಿಚಾರಣೆಗೆ ತಲೆಮರೆಸಿಕೊಂಡಿದ್ದ ಈತನನ್ನು ಬಂಟ್ವಾಳ ಉಪವಿಭಾಗದ ಡಿವೈಎಸ್.ಪಿ ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ , ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಪೋಲಿಸ್ ಉಪನಿರೀಕ್ಷಕರುಗಳಾದ ಹರೀಶ್, ಮೂರ್ತಿ, ಲೋಲಕ್ಷ ಅವರ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಹರಿಶ್ಚಂದ್ರ, ಗಣೇಶ್ ಪ್ರಸಾದ್, ರಾಜೇಶ್ ಅವರ ತಂಡ ಪುತ್ತೂರು ತಾಲೂಕಿನ ಕೆಯ್ಯೂರು ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…