ಬೆಳಗಾವಿ ; ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ. ಎ. ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸದ್ರಿ ಯೋಜನೆಗಳಿಗೆ ಆಯವ್ಯಯ ದಲ್ಲಿ 52,009 ಕೋಟಿ ರೂ ಗಳನ್ನು ಒದಗಿಸಿದೆ.
ರಾಜ್ಯ ಸರ್ಕಾರವು 2023-24 ರಲ್ಲಿ 90,280 ಕೋಟಿ ರೂ ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ 2.6% ಇದ್ದು, ರಾಜ್ಯ ಸರ್ಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡ ಮತ್ತು ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಸಾಲಮಿತಿಗೆ ಒಳಪಟ್ಟಿದೆ ಎಂದರು.
ರಾಜ್ಯ ಸರ್ಕಾರವು ರಾಜಸ್ವ ಹಾಗು ಬಂಡವಾಳ ಸ್ವೀಕೃತಿಗಳಿಂದ ಮತ್ತು ಕೇಂದ್ರ ಸರ್ಕಾರ ನಿಗದಿಪಡಿಸುವ ಮಿತಿಯೊಳಗೆ ಸಾಲವನ್ನು ಪಡೆಯುವ ಮೂಲಕ ಆಯವ್ಯಯದಲ್ಲಿ ಅಂದಾಜಿಸಿರುವ ವೆಚ್ಚವನ್ನು ಭರಿಸುತ್ತದೆ. ಈ ಸ್ವೀಕೃತಿಗಳನ್ನು ಮೀರಿ ಈವರೆಗೂ ಯಾವುದೇ ವೆಚ್ಚದ ಹೊರೆ ರಾಜ್ಯ ಸರ್ಕಾರಕ್ಕೆ ಉಂಟಾಗಿರುವುದಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿ ಕುಂಠಿತವಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿದ್ದು ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…