ಬದಿಯಡ್ಕ: ಹಲವಾರು ಕ್ಷೇತ್ರ ಉತ್ಸವಗಳಿಗೆ ಸಿಡಿಮದ್ದು ತಯಾರಿಸಿ ನೀಡುತ್ತಾ “ಬೆಡಿ ಖಾದ್ರಿಚ್ಚ” ಎಂದೇ ಜನಜನಿತರಾದ ಕೆ.ಎಂ.ಅಬ್ದುಲ್ ಖಾದರ್(70) ಇಂದು ಬೆಳಿಗ್ಗೆ ನಿಧನರಾದರು. ಅಲ್ಪ ಕಾಲದ ಅಸೌಖ್ಯದಿಂದ ಇವರನ್ನು ಮಂಗಳೂರು ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿತ್ತು.
ಸೋಹ ಮುಂತಾಸ್ ಮಂಜಿಲ್ ನಲ್ಲಿ ವಾಸಿಸುತ್ತಿದ್ದ ಇವರು ಬದಿಯಡ್ಕದ ಪೆರ್ಲ ರಸ್ತೆಯಲ್ಲಿ ಸಿಡಿಮದ್ದು ಪಟಾಕಿಗಳ ಅಂಗಡಿಗಳನ್ನು ತೆರೆದಿದ್ದರು. ಜಿಲ್ಲೆಯ ಹಲವಾರು ಪ್ರಸಿದ್ಧ ಕ್ಷೇತ್ರಗಳ ಉತ್ಸವ ಸಂದರ್ಭದಲ್ಲಿ ಪರಂಪರಾಗತವಾಗಿ ಸಿಡಿಮದ್ದು ಸಿಡಿಸುವ ವೃತ್ತಿಯನ್ನು ನಿರ್ವಹಿಸುತ್ತಿದ್ದ ಇವರು ಸರ್ವಧರ್ಮ ಸಮನ್ವತೆಗೆ ಪ್ರಾಧಾನ್ಯತೆ ನೀಡಿ ಎಲ್ಲಾ ಧರ್ಮಿಯರಲ್ಲೂ ಆತ್ಮೀಯತೆಯನ್ನು ಬೆಳೆಸಿಕೊಂಡಿದ್ದರು.
2022ರಲ್ಲಿ ಉಪ್ಲೇರಿ ಮಂತ್ರಮೂರ್ತಿ ಗುಳಿಗ ಸನ್ನಿಧಿಯಲ್ಲಿ ನಡೆದ ಶ್ರೀರುದ್ರ ಹೈಮಾವತೀ ಮಹಾ ಯಾಗದ ಸಂದರ್ಭದಲ್ಲಿ ಇವರನ್ನು ಎಡನೀರು ಮಠದ ಶ್ರೀಶ್ರೀಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಸನ್ಮಾನಿಸಿದ್ದರು.
ಮೃತರು ಪತ್ನಿ ಸುಬೈದ, ಮಕ್ಕಳಾದ ಫೌಸಿಯ,ಇಖ್ಬಾಲ್ ಕಾಸಿಂ,ಬಲ್ಕೀಸ್,ಸೋಹ ಮುಂತಾಸ್, ಮೊಮ್ಮಕ್ಕಳಾದ ಇಬ್ರಾಹಿಂ,ಫೈರುಸ,ಮುಸ್ತಫ,ಅಮೀನ್.ಸಹೋದರ ಅಬ್ದುಲ್ ,ಆಯಿಷಾ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…