ಕರಾವಳಿ

ಪ್ಯಾಕ್ಟರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ವಾಹನ ಕಳವು ಪ್ರಕರಣ; ಆರೋಪಿಗಳ ಬಂಧನ

ಪುಂಜಾಲಕಟ್ಟೆ:ಪ್ಯಾಕ್ಟರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ವಾಹನ ಕಳವು ಪ್ರಕರಣದ ಆರೋಪಿಗಳ ಸಹಿತ ವಾಹನವನ್ನು ಪುಂಜಾಲಕಟ್ಟೆ ಎಸ್.ಐ‌.ನಂದಕುಮಾರ್ ನೇತ್ರತ್ವದ ತಂಡ ವಶಪಡಿಸಿಕೊಂಡ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲಯ ಕನಕಪ್ಪ‌ ಹಾಗೂ ರಮೇಶ್ ಚೌಹಾಣ್ ಬಂಧಿತ ಆರೋಪಿಗಳು.

 


‌ ಘಟನೆ ಏನು?
ಪೊಲೀಸ್ ಠಾಣಾ ವ್ಯಾಪ್ತಿಯ ಮಾಲಾಡಿ ಗ್ರಾಮದ ಅರ್ತಿಲ ಎಂಬಲ್ಲಿರುವ TIYARA ಇಂಟರ್‌ಲಾಕ್‌ ಫ್ಯಾಕ್ಟರಿಯ ಮಾಲಿಕರಾದ ಟೆರೆನ್ಸ್ ಜೋಶೆಲ್ ವೇಗಸ್ ರವರ KA19D5858 ನೇ ಬೊಲೆರೋ ಪಿಕಪ್‌ ಗೂಡ್ಸ್‌ ವಾಹನವನ್ನು ಡಿ. 2 ರಂದು ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಸಮಯ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, , ಈ ಬಗ್ಗೆ ಡಿ.3ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 76/2024 ಕಲಂ: 303(2) BNS 2023 ರಂತೆ ಪ್ರಕರಣ ದಾಖಲಾಗಿರುತ್ತು.

ಪ್ರಕರಣಕ್ಕೆ ಸಂಬಂದಪಟ್ಟಂತೆ ಆರೋಪಿಗಳನ್ನು ಬಾಗಲಕೋಟೆಯಿಂದ ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿದ್ದು ಆರೋಪಿಗಳು ಕಳವು ಮಾಡಿದ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ KA19D5858 ನೇ ನಂಬ್ರದ ಬೊಲೆರೋ ಪಿಕಪ್ ಗೂಡ್ಸ್ ವಾಹನವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ದ.ಕ ಜಿಲ್ಲಾ ಪೊಲೀಸ್‌ ಅಧೀಕ್ಷಕ ಯತೀಶ್‌ ಎನ್‌, ಐ.ಪಿ.ಎಸ್‌ ಮತ್ತು ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ರಾಜೇಂದ್ರ ಡಿ.ಎಸ್ ರವರ ನಿರ್ದೇಶನದಂತೆ ಬಂಟ್ವಾಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ವಿಜಯ ಪ್ರಸಾದ್ ರವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕ ನಾಗೇಶ್‌ ಕದ್ರಿ ರವರ ಆದೇಶದಂತೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ನಂದ ಕುಮಾರ್‌ ಎಂ.ಎಂ ಮತ್ತು ಓಮನ ಎನ್.ಕೆ ರವರ ಜೊತೆಗೆ ಸಿಬ್ಬಂದಿಗಳಾದ ಸಂದೀಪ್‌ ಎಸ್‌, ರಾಹುಲ್‌ ರಾವ್‌, ರಜಿತ್‌, ಸಲೀಂ ಪಟೇಲ್‌, ಪ್ರಕಾಶ್‌, ರಮ್ಯ ವೇಣೂರು ಠಾಣಾ ಸಿಬ್ಬಂದಿ ಬಸವರಾಜ್ ಹಾಗೂ ಗಣಕಯಂತ್ರ ವಿಭಾಗದ ಸಿಬ್ಬಂದಿಗಳಾದ ಸಂಪತ್‌ ಮತ್ತು ದಿವಾಕರ ರವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

16 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

17 hours ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

17 hours ago

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…

20 hours ago

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…

21 hours ago

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…

21 hours ago