ಜನ ಮನದ ನಾಡಿ ಮಿಡಿತ

Advertisement

ಸಾಂಸ್ಕೃತಿಕ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಪ್ರತಿಭೆ ಸುನಿಕ್ಷಾ ಪೂಜಾರಿ

ಮೂಡಬಿದಿರೆ; ಮೂಡುಬಿದಿರೆಯ ಪಡುಮಾರ್ನಾಡು ಅಮನಬೆಟ್ಟು ನಿವಾಸಿ ಸುನಿಕ್ಷಾ ಪೂಜಾರಿ ನೃತ್ಯ, ಚಿತ್ರ ಬಿಡಿಸುವುದು, ಯಕ್ಷಗಾನ, ಕುಣಿತ ಭಜನೆ, ಸಂಗೀತ, ಭಜನೆ, ಭಾಷಣ ಮುಂತಾದ ವಿಷಯಗಳಲ್ಲಿ ಆಸಕ್ತಿ ಹೊಂದಿದ್ದಾರೆ.

ಸಂಗೀತವನ್ನು ಶ್ರೀಮತಿ ತುಳಸಿ ರಾಘವೇಂದ್ರ ಪೆಜತ್ತಾಯ ಇವರ ಹತ್ತಿರ ಕಲಿಯುತ್ತಿದ್ದು, ಮಹಮ್ಮಾಯಿ ಭಜನ ಮಂಡಳಿ ಕೋಟೆ ಬಾಗಿಲು ಮೂಡುಬಿದ್ರೆಯಲ್ಲಿ ಕುಣಿತ ಭಜನೆಯನ್ನು ಅಶೋಕ್ ನಾಯ್ಕ್ ಕಳಸಬೈಲು ಇವರಲ್ಲಿ ಕಲಿಯುತ್ತಿದ್ದಾರೆ. ಯಕ್ಷಗಾನವನ್ನು ಶಿವಕುಮಾರ್ ಸರ್ ಇವರ ಹತ್ತಿರ ಕಲಿಯುತ್ತಿದ್ದಾಳೆ. ಧರ್ಮಸ್ಥಳದವರು ಆಯೋಜಿಸಿದ ಯೋಗ ಶಿಬಿರದಲ್ಲಿ ಪಾಲ್ಗೊಂಡಿರುತ್ತಾಳೆ. ಇವಳು ಛದ್ಮವೇಶ, ಕಥೆ ಹೇಳುವುದು, ಜಾನಪದ ಹಾಡು, ಭಕ್ತಿ ಗೀತೆ ಮುಂತಾದರಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸುರಕ್ಷತಾ ಇಲಾಖೆ ಆಯೋಜಿಸಿದ ಮೂಡುಬಿದಿರೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2022- 2023ನೇ ರಲ್ಲಿ ಕಥೆ ಹೇಳುವುದು ಪ್ರಥಮ ಸ್ಥಾನ ಪಡೆದಿರುತ್ತಾಳೆ. ಇವಳು ರಾಜ್ಯಮಟ್ಟದ ಕುಣಿತ ಭಜನೆ ಯಲ್ಲಿ ಭಾಗವಹಿಸಿರುತ್ತಾಳೆ ಸಾರ್ವಜನಿಕ ವಲಯದಲ್ಲಿ ಹಲವು ಪ್ರಶಸ್ತಿಗಳನ್ನು ಮತ್ತು ಅಭಿನಂದನೆ ಪತ್ರಗಳು ಬಂದಿರುತ್ತದೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಮುಖ್ಯಸ್ಥರಾದ ಪದ್ಮಶ್ರೀ ಇವರ ನೇತೃತ್ವದಲ್ಲಿ ನಡೆದ ಹಲವಾರು ಕಡೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

 

ಅಭಿಮತ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪ್ರತಿಭಾ ಲೋಕ ಹಾಗೂ ಪ್ರತಿಭಾ ಚುಕ್ಕಿಯಲ್ಲಿ ಭಾಗವಹಿಸಿದ್ದು. ಮೈಸೂರಿನಲ್ಲಿ ನಡೆದಂತಹ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಈ ಪುಟಾಣಿ ಪ್ರತಿಭೆ ಸುನಿಕ್ಷಾ ಪೂಜಾರಿಯವರು ಸುರೇಂದ್ರ ಸಿ ಪೂಜಾರಿ ಹಾಗೂ ಆಶಾ ಸುರೇಂದ್ರ ಪೂಜಾರಿ ದಂಪತಿಯ ಪುತ್ರಿಯಾಗಿದ್ದಾರೆ. ಪ್ರಸ್ತುತ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆ ಅಲಂಗಾರಿನಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!