ಮೂಡಬಿದಿರೆ; ಮೂಡುಬಿದಿರೆಯ ಪಡುಮಾರ್ನಾಡು ಅಮನಬೆಟ್ಟು ನಿವಾಸಿ ಸುನಿಕ್ಷಾ ಪೂಜಾರಿ ನೃತ್ಯ, ಚಿತ್ರ ಬಿಡಿಸುವುದು, ಯಕ್ಷಗಾನ, ಕುಣಿತ ಭಜನೆ, ಸಂಗೀತ, ಭಜನೆ, ಭಾಷಣ ಮುಂತಾದ ವಿಷಯಗಳಲ್ಲಿ ಆಸಕ್ತಿ ಹೊಂದಿದ್ದಾರೆ.
ಸಂಗೀತವನ್ನು ಶ್ರೀಮತಿ ತುಳಸಿ ರಾಘವೇಂದ್ರ ಪೆಜತ್ತಾಯ ಇವರ ಹತ್ತಿರ ಕಲಿಯುತ್ತಿದ್ದು, ಮಹಮ್ಮಾಯಿ ಭಜನ ಮಂಡಳಿ ಕೋಟೆ ಬಾಗಿಲು ಮೂಡುಬಿದ್ರೆಯಲ್ಲಿ ಕುಣಿತ ಭಜನೆಯನ್ನು ಅಶೋಕ್ ನಾಯ್ಕ್ ಕಳಸಬೈಲು ಇವರಲ್ಲಿ ಕಲಿಯುತ್ತಿದ್ದಾರೆ. ಯಕ್ಷಗಾನವನ್ನು ಶಿವಕುಮಾರ್ ಸರ್ ಇವರ ಹತ್ತಿರ ಕಲಿಯುತ್ತಿದ್ದಾಳೆ. ಧರ್ಮಸ್ಥಳದವರು ಆಯೋಜಿಸಿದ ಯೋಗ ಶಿಬಿರದಲ್ಲಿ ಪಾಲ್ಗೊಂಡಿರುತ್ತಾಳೆ. ಇವಳು ಛದ್ಮವೇಶ, ಕಥೆ ಹೇಳುವುದು, ಜಾನಪದ ಹಾಡು, ಭಕ್ತಿ ಗೀತೆ ಮುಂತಾದರಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸುರಕ್ಷತಾ ಇಲಾಖೆ ಆಯೋಜಿಸಿದ ಮೂಡುಬಿದಿರೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2022- 2023ನೇ ರಲ್ಲಿ ಕಥೆ ಹೇಳುವುದು ಪ್ರಥಮ ಸ್ಥಾನ ಪಡೆದಿರುತ್ತಾಳೆ. ಇವಳು ರಾಜ್ಯಮಟ್ಟದ ಕುಣಿತ ಭಜನೆ ಯಲ್ಲಿ ಭಾಗವಹಿಸಿರುತ್ತಾಳೆ ಸಾರ್ವಜನಿಕ ವಲಯದಲ್ಲಿ ಹಲವು ಪ್ರಶಸ್ತಿಗಳನ್ನು ಮತ್ತು ಅಭಿನಂದನೆ ಪತ್ರಗಳು ಬಂದಿರುತ್ತದೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಮುಖ್ಯಸ್ಥರಾದ ಪದ್ಮಶ್ರೀ ಇವರ ನೇತೃತ್ವದಲ್ಲಿ ನಡೆದ ಹಲವಾರು ಕಡೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಅಭಿಮತ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪ್ರತಿಭಾ ಲೋಕ ಹಾಗೂ ಪ್ರತಿಭಾ ಚುಕ್ಕಿಯಲ್ಲಿ ಭಾಗವಹಿಸಿದ್ದು. ಮೈಸೂರಿನಲ್ಲಿ ನಡೆದಂತಹ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಈ ಪುಟಾಣಿ ಪ್ರತಿಭೆ ಸುನಿಕ್ಷಾ ಪೂಜಾರಿಯವರು ಸುರೇಂದ್ರ ಸಿ ಪೂಜಾರಿ ಹಾಗೂ ಆಶಾ ಸುರೇಂದ್ರ ಪೂಜಾರಿ ದಂಪತಿಯ ಪುತ್ರಿಯಾಗಿದ್ದಾರೆ. ಪ್ರಸ್ತುತ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆ ಅಲಂಗಾರಿನಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…