ಜನ ಮನದ ನಾಡಿ ಮಿಡಿತ

Advertisement

ಪಡುಪಣಂಬೂರು ಗ್ರಾ.ಪಂ. ವ್ಯಾಪ್ತಿಯ ಓವರ್ ಹೆಡ್ ನೀರಿನ ಟ್ಯಾಂಕ್ ಗೆ ಕಾಮಗಾರಿಗೆ ಶಿಲಾನ್ಯಾಸ..!

ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹತ್ತನೇ ತೋಕೂರು ಗ್ರಾಮದ ಒಂದನೇ ವಾರ್ಡಿನ ಸರ್ಕಾರಿ ಹಿಂದುಸ್ತಾನಿ ಶಾಲೆ ಬಳಿ ನಿರ್ಮಾಣವಾಗಲಿರುವ 50 ಸಾವಿರ ಲೀಟರ್ ಸಾಮರ್ಥ್ಯದ ಕುಡಿಯುವ ನೀರಿನ ಓವರ್ ಹೆಡ್ ನೀರಿನ ಟ್ಯಾಂಕ್ ಗೆ ಎಂ ಆರ್ ಪಿ ಎಲ್ ನ ಸಿಎಸ್ಆರ್ ಯೋಜನೆಯಡಿ 25 ಲಕ್ಷ ರೂಪಾಯಿಗಳನ್ನು ಶಾಸಕರು ಮಂಜೂರು ಮಾಡಿದ್ದು ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.

ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದ್ದು ಅಭಿವೃದ್ಧಿ ನಿರಂತರವಾಗಿ ನಡೆಯಲಿದೆ ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡು ಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್ ವಹಿಸಿದ್ದರು
ಈ ಸಂದರ್ಭ ಪಂಚಾಯತ್ ಉಪಾಧ್ಯಕ್ಷ ಹೇಮನಾಥ ಆಮೀನ್ ಸದಸ್ಯರಾದ ಮೋಹನ್ ದಾಸ್, ಅಭಿವೃದ್ಧಿ ಅಧಿಕಾರಿ ಸುದೀರ್, ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿ, ಮಾಜೀ ಅಧ್ಯಕ್ಷ ಹರಿದಾಸ್ ಭಟ್, ವಿಶ್ವ ಬ್ಯಾಂಕ್ ನೀರು ಸರಬರಾಜು ಸಮಿತಿ 10ನೇ ತೋಕೂರು ಕ್ಲಸ್ಟರ್-2 ರ ಅಧ್ಯಕ್ಷ ಪಿ ಸಿ ಕೋಟ್ಯಾನ್, ವಿನೋದ್ ಬೊಳ್ಳೂರು, ರಮೇಶ್ ದೇವಾಡಿಗ, ವಿನೋದ್ ಸುವರ್ಣ, ಲಕ್ಷ್ಮಣ್ ಸಾಲ್ಯಾನ್ ಪುನರೂರು, ರಮೇಶ್ ಕಲ್ಲಾಪು, ಲೋಹಿತ್ ಕೋಟ್ಯಾನ್ ತೋಕೂರು, ದಾಮೋದರ ಶೆಟ್ಟಿ, ಗೋಪಾಲ್ ಮೂಲ್ಯ, ನಟ್ಟಿ ಹಿತ್ಲು ಕನ್ಸ್ಟ್ರಕ್ಷನ್ ಗುತ್ತಿಗೆದಾರ ಅರುಣ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!