ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹತ್ತನೇ ತೋಕೂರು ಗ್ರಾಮದ ಒಂದನೇ ವಾರ್ಡಿನ ಸರ್ಕಾರಿ ಹಿಂದುಸ್ತಾನಿ ಶಾಲೆ ಬಳಿ ನಿರ್ಮಾಣವಾಗಲಿರುವ 50 ಸಾವಿರ ಲೀಟರ್ ಸಾಮರ್ಥ್ಯದ ಕುಡಿಯುವ ನೀರಿನ ಓವರ್ ಹೆಡ್ ನೀರಿನ ಟ್ಯಾಂಕ್ ಗೆ ಎಂ ಆರ್ ಪಿ ಎಲ್ ನ ಸಿಎಸ್ಆರ್ ಯೋಜನೆಯಡಿ 25 ಲಕ್ಷ ರೂಪಾಯಿಗಳನ್ನು ಶಾಸಕರು ಮಂಜೂರು ಮಾಡಿದ್ದು ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದ್ದು ಅಭಿವೃದ್ಧಿ ನಿರಂತರವಾಗಿ ನಡೆಯಲಿದೆ ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡು ಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್ ವಹಿಸಿದ್ದರು
ಈ ಸಂದರ್ಭ ಪಂಚಾಯತ್ ಉಪಾಧ್ಯಕ್ಷ ಹೇಮನಾಥ ಆಮೀನ್ ಸದಸ್ಯರಾದ ಮೋಹನ್ ದಾಸ್, ಅಭಿವೃದ್ಧಿ ಅಧಿಕಾರಿ ಸುದೀರ್, ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿ, ಮಾಜೀ ಅಧ್ಯಕ್ಷ ಹರಿದಾಸ್ ಭಟ್, ವಿಶ್ವ ಬ್ಯಾಂಕ್ ನೀರು ಸರಬರಾಜು ಸಮಿತಿ 10ನೇ ತೋಕೂರು ಕ್ಲಸ್ಟರ್-2 ರ ಅಧ್ಯಕ್ಷ ಪಿ ಸಿ ಕೋಟ್ಯಾನ್, ವಿನೋದ್ ಬೊಳ್ಳೂರು, ರಮೇಶ್ ದೇವಾಡಿಗ, ವಿನೋದ್ ಸುವರ್ಣ, ಲಕ್ಷ್ಮಣ್ ಸಾಲ್ಯಾನ್ ಪುನರೂರು, ರಮೇಶ್ ಕಲ್ಲಾಪು, ಲೋಹಿತ್ ಕೋಟ್ಯಾನ್ ತೋಕೂರು, ದಾಮೋದರ ಶೆಟ್ಟಿ, ಗೋಪಾಲ್ ಮೂಲ್ಯ, ನಟ್ಟಿ ಹಿತ್ಲು ಕನ್ಸ್ಟ್ರಕ್ಷನ್ ಗುತ್ತಿಗೆದಾರ ಅರುಣ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…