ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹತ್ತನೇ ತೋಕೂರು ಗ್ರಾಮದ ಒಂದನೇ ವಾರ್ಡಿನ ಸರ್ಕಾರಿ ಹಿಂದುಸ್ತಾನಿ ಶಾಲೆ ಬಳಿ ನಿರ್ಮಾಣವಾಗಲಿರುವ 50 ಸಾವಿರ ಲೀಟರ್ ಸಾಮರ್ಥ್ಯದ ಕುಡಿಯುವ ನೀರಿನ ಓವರ್ ಹೆಡ್ ನೀರಿನ ಟ್ಯಾಂಕ್ ಗೆ ಎಂ ಆರ್ ಪಿ ಎಲ್ ನ ಸಿಎಸ್ಆರ್ ಯೋಜನೆಯಡಿ 25 ಲಕ್ಷ ರೂಪಾಯಿಗಳನ್ನು ಶಾಸಕರು ಮಂಜೂರು ಮಾಡಿದ್ದು ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದ್ದು ಅಭಿವೃದ್ಧಿ ನಿರಂತರವಾಗಿ ನಡೆಯಲಿದೆ ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡು ಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್ ವಹಿಸಿದ್ದರು
ಈ ಸಂದರ್ಭ ಪಂಚಾಯತ್ ಉಪಾಧ್ಯಕ್ಷ ಹೇಮನಾಥ ಆಮೀನ್ ಸದಸ್ಯರಾದ ಮೋಹನ್ ದಾಸ್, ಅಭಿವೃದ್ಧಿ ಅಧಿಕಾರಿ ಸುದೀರ್, ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿ, ಮಾಜೀ ಅಧ್ಯಕ್ಷ ಹರಿದಾಸ್ ಭಟ್, ವಿಶ್ವ ಬ್ಯಾಂಕ್ ನೀರು ಸರಬರಾಜು ಸಮಿತಿ 10ನೇ ತೋಕೂರು ಕ್ಲಸ್ಟರ್-2 ರ ಅಧ್ಯಕ್ಷ ಪಿ ಸಿ ಕೋಟ್ಯಾನ್, ವಿನೋದ್ ಬೊಳ್ಳೂರು, ರಮೇಶ್ ದೇವಾಡಿಗ, ವಿನೋದ್ ಸುವರ್ಣ, ಲಕ್ಷ್ಮಣ್ ಸಾಲ್ಯಾನ್ ಪುನರೂರು, ರಮೇಶ್ ಕಲ್ಲಾಪು, ಲೋಹಿತ್ ಕೋಟ್ಯಾನ್ ತೋಕೂರು, ದಾಮೋದರ ಶೆಟ್ಟಿ, ಗೋಪಾಲ್ ಮೂಲ್ಯ, ನಟ್ಟಿ ಹಿತ್ಲು ಕನ್ಸ್ಟ್ರಕ್ಷನ್ ಗುತ್ತಿಗೆದಾರ ಅರುಣ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…