ಜನ ಮನದ ನಾಡಿ ಮಿಡಿತ

Advertisement

ಚಿತ್ರ ಮಂದಿರದಲ್ಲಿ ಕಾಲ್ತುಳಿತ; ಅಲ್ಲು ಅರ್ಜುನ್ ಗೆ ಬೆಳಗ್ಗೆ ಜೈಲು, ಸಂಜೆ ಬೇಲು

ಚಿತ್ರ ಮಂದಿರದಲ್ಲಿಕಾಲ್ತುಳಿತ; ಅಲ್ಲು ಅರ್ಜುನ್ ಗೆ ಬೆಳಗ್ಗೆ ಜೈಲು , ಸಂಜೆ ಬೇಲು

 

ಹೈದರಾಬಾದ್: ಡಿಸೆಂಬರ್ ೪ ರಂದು ನಡೆದ ಕಾಲ್ತುಳಿತ ದುರ್ಘಟನೆಯ ಬಗ್ಗೆ ಮೃತಪಟ್ಟ ಮಹಿಳೆಯ ಗಂಡ ನೀಡಿದ ದೂರಿನ ಅನ್ವಯ ಶುಕ್ರವಾರ ಬೆಳಗ್ಗೆ ಹೈದ್ರಾಬಾದ್ ಪೊಲೀಸರು ತೆಲುಗು ಚಿತ್ರ ನಟ ಅಲ್ಲು ಅರ್ಜುನ್ ರವರನ್ನು ಬಂಧಿಸಿದೆ. ಬಳಿಕ ಸಂಜೆಯ ಹೊತ್ತಿಗೆ ಜಾಮೀನು ನೀಡಲು ಹೈಕೋರ್ಟ್ ಸೂಚಿಸಿದೆ.
ಅಲ್ಲು ಅರ್ಜುನ್ ನಟನೆಯ ಪುಷ್ಪ ೨ ಚಿತ್ರ ಭಾರಿ ಸದ್ದು ಮಾಡುತ್ತಿದೆ. ಡಿಸೆಂಬರ್ ೪ರಂದು ಚಿತ್ರ ಬಿಡುಗಡೆಯ ದಿನ ಹೈದ್ರಾಬಾದ್ ನ ಸಂಧ್ಯಾ ಚಿತ್ರ ಮಂದಿರ ಬಳಿ ಭಾರಿ ಸಂಖ್ಯೆಯ ಜನ ಲಗ್ಗೆ ಇಟ್ಟಿದ್ದರು. ಅದೇ ದಿನ ಅಲ್ಲು ಅರ್ಜುನ್ ಕೂಡ ಚಿತ್ರ ನೋಡಲು ಬಂದಿದ್ದಾರೆ. ಈ ವೇಳೆ ಜನರನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ ಓರ್ವ ಯುವತಿ ಮತ್ತು ಆಕೆಯ ಮಗ ಕಾಲ್ತುಳಿತಕ್ಕೀಡಾಗಿದ್ದಾರೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಈ ಸಂಬಂಧ ನಟನ ವಿರುದ್ಧ ಎಫ್. ಐ. ಆರ್ ದಾಖಲಿಸಲಾಗಿತ್ತು. ನಟನನ್ನು ಚಿಕ್ಕಡ್ ಪಳ್ಳಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದು, ಈ ವೇಳೆ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್, ಪ್ರೊಡ್ಯೂಸರ್ ದಿಲ್ ರಾಜು, ಹಾಗೂ ಇತರೆ ಸಂಬಂಧಿಗಳು ಠಾಣೆಗೆ ಧಾವಿಸಿದ್ದಾರೆ. ನಟನನ್ನು ಸಂಜೆ ೩. ೩೦ ರ ವೇಳೆಗೆ ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಇವರನ್ನು ೧೪ ದಿನಗಳ ನ್ಯಾಯಾಂಗ ಬಂಧನದ ಆದೇಶ ಹೊರಡಿಸಿತ್ತು. ಹೀಗಾಗಿ ಅಲ್ಲು ಅವರನ್ನು ಚಂಚಲ್ ಗುಡ ಸೆಂಟ್ರಲ್ ಜೈಲಿಗೆ ಹಾಕಲಾಗಿತ್ತು. ಆದರೆ ತೆಲಂಗಾಣ ಹೈ ಕೋರ್ಟ್ ಮಧ್ಯ ಪ್ರವೇಶಿಸಿ ನಾಲ್ಕು ವಾರಗಳ ಜಾಮೀನು ನೀಡುವಂತೆ ಆದೇಶಿಸಿದೆ. ಆದರೆ ಅದಾಗಲೇ ರಾತ್ರಿಯಾದ್ದರಿಂದ ಶನಿವಾರ ಬೆಳಗ್ಗೆ ಅಲ್ಲೂ ಅರ್ಜುನ್ ರವರನ್ನು ಬಿಡುಗಡೆಗೊಳಿಸಲಾಗಿದೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!