ಚಿತ್ರ ಮಂದಿರದಲ್ಲಿಕಾಲ್ತುಳಿತ; ಅಲ್ಲು ಅರ್ಜುನ್ ಗೆ ಬೆಳಗ್ಗೆ ಜೈಲು , ಸಂಜೆ ಬೇಲು
ಹೈದರಾಬಾದ್: ಡಿಸೆಂಬರ್ ೪ ರಂದು ನಡೆದ ಕಾಲ್ತುಳಿತ ದುರ್ಘಟನೆಯ ಬಗ್ಗೆ ಮೃತಪಟ್ಟ ಮಹಿಳೆಯ ಗಂಡ ನೀಡಿದ ದೂರಿನ ಅನ್ವಯ ಶುಕ್ರವಾರ ಬೆಳಗ್ಗೆ ಹೈದ್ರಾಬಾದ್ ಪೊಲೀಸರು ತೆಲುಗು ಚಿತ್ರ ನಟ ಅಲ್ಲು ಅರ್ಜುನ್ ರವರನ್ನು ಬಂಧಿಸಿದೆ. ಬಳಿಕ ಸಂಜೆಯ ಹೊತ್ತಿಗೆ ಜಾಮೀನು ನೀಡಲು ಹೈಕೋರ್ಟ್ ಸೂಚಿಸಿದೆ.
ಅಲ್ಲು ಅರ್ಜುನ್ ನಟನೆಯ ಪುಷ್ಪ ೨ ಚಿತ್ರ ಭಾರಿ ಸದ್ದು ಮಾಡುತ್ತಿದೆ. ಡಿಸೆಂಬರ್ ೪ರಂದು ಚಿತ್ರ ಬಿಡುಗಡೆಯ ದಿನ ಹೈದ್ರಾಬಾದ್ ನ ಸಂಧ್ಯಾ ಚಿತ್ರ ಮಂದಿರ ಬಳಿ ಭಾರಿ ಸಂಖ್ಯೆಯ ಜನ ಲಗ್ಗೆ ಇಟ್ಟಿದ್ದರು. ಅದೇ ದಿನ ಅಲ್ಲು ಅರ್ಜುನ್ ಕೂಡ ಚಿತ್ರ ನೋಡಲು ಬಂದಿದ್ದಾರೆ. ಈ ವೇಳೆ ಜನರನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ ಓರ್ವ ಯುವತಿ ಮತ್ತು ಆಕೆಯ ಮಗ ಕಾಲ್ತುಳಿತಕ್ಕೀಡಾಗಿದ್ದಾರೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಈ ಸಂಬಂಧ ನಟನ ವಿರುದ್ಧ ಎಫ್. ಐ. ಆರ್ ದಾಖಲಿಸಲಾಗಿತ್ತು. ನಟನನ್ನು ಚಿಕ್ಕಡ್ ಪಳ್ಳಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದು, ಈ ವೇಳೆ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್, ಪ್ರೊಡ್ಯೂಸರ್ ದಿಲ್ ರಾಜು, ಹಾಗೂ ಇತರೆ ಸಂಬಂಧಿಗಳು ಠಾಣೆಗೆ ಧಾವಿಸಿದ್ದಾರೆ. ನಟನನ್ನು ಸಂಜೆ ೩. ೩೦ ರ ವೇಳೆಗೆ ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಇವರನ್ನು ೧೪ ದಿನಗಳ ನ್ಯಾಯಾಂಗ ಬಂಧನದ ಆದೇಶ ಹೊರಡಿಸಿತ್ತು. ಹೀಗಾಗಿ ಅಲ್ಲು ಅವರನ್ನು ಚಂಚಲ್ ಗುಡ ಸೆಂಟ್ರಲ್ ಜೈಲಿಗೆ ಹಾಕಲಾಗಿತ್ತು. ಆದರೆ ತೆಲಂಗಾಣ ಹೈ ಕೋರ್ಟ್ ಮಧ್ಯ ಪ್ರವೇಶಿಸಿ ನಾಲ್ಕು ವಾರಗಳ ಜಾಮೀನು ನೀಡುವಂತೆ ಆದೇಶಿಸಿದೆ. ಆದರೆ ಅದಾಗಲೇ ರಾತ್ರಿಯಾದ್ದರಿಂದ ಶನಿವಾರ ಬೆಳಗ್ಗೆ ಅಲ್ಲೂ ಅರ್ಜುನ್ ರವರನ್ನು ಬಿಡುಗಡೆಗೊಳಿಸಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…