ಚಿತ್ರ ಮಂದಿರದಲ್ಲಿಕಾಲ್ತುಳಿತ; ಅಲ್ಲು ಅರ್ಜುನ್ ಗೆ ಬೆಳಗ್ಗೆ ಜೈಲು , ಸಂಜೆ ಬೇಲು
ಹೈದರಾಬಾದ್: ಡಿಸೆಂಬರ್ ೪ ರಂದು ನಡೆದ ಕಾಲ್ತುಳಿತ ದುರ್ಘಟನೆಯ ಬಗ್ಗೆ ಮೃತಪಟ್ಟ ಮಹಿಳೆಯ ಗಂಡ ನೀಡಿದ ದೂರಿನ ಅನ್ವಯ ಶುಕ್ರವಾರ ಬೆಳಗ್ಗೆ ಹೈದ್ರಾಬಾದ್ ಪೊಲೀಸರು ತೆಲುಗು ಚಿತ್ರ ನಟ ಅಲ್ಲು ಅರ್ಜುನ್ ರವರನ್ನು ಬಂಧಿಸಿದೆ. ಬಳಿಕ ಸಂಜೆಯ ಹೊತ್ತಿಗೆ ಜಾಮೀನು ನೀಡಲು ಹೈಕೋರ್ಟ್ ಸೂಚಿಸಿದೆ.
ಅಲ್ಲು ಅರ್ಜುನ್ ನಟನೆಯ ಪುಷ್ಪ ೨ ಚಿತ್ರ ಭಾರಿ ಸದ್ದು ಮಾಡುತ್ತಿದೆ. ಡಿಸೆಂಬರ್ ೪ರಂದು ಚಿತ್ರ ಬಿಡುಗಡೆಯ ದಿನ ಹೈದ್ರಾಬಾದ್ ನ ಸಂಧ್ಯಾ ಚಿತ್ರ ಮಂದಿರ ಬಳಿ ಭಾರಿ ಸಂಖ್ಯೆಯ ಜನ ಲಗ್ಗೆ ಇಟ್ಟಿದ್ದರು. ಅದೇ ದಿನ ಅಲ್ಲು ಅರ್ಜುನ್ ಕೂಡ ಚಿತ್ರ ನೋಡಲು ಬಂದಿದ್ದಾರೆ. ಈ ವೇಳೆ ಜನರನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ ಓರ್ವ ಯುವತಿ ಮತ್ತು ಆಕೆಯ ಮಗ ಕಾಲ್ತುಳಿತಕ್ಕೀಡಾಗಿದ್ದಾರೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಈ ಸಂಬಂಧ ನಟನ ವಿರುದ್ಧ ಎಫ್. ಐ. ಆರ್ ದಾಖಲಿಸಲಾಗಿತ್ತು. ನಟನನ್ನು ಚಿಕ್ಕಡ್ ಪಳ್ಳಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದು, ಈ ವೇಳೆ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್, ಪ್ರೊಡ್ಯೂಸರ್ ದಿಲ್ ರಾಜು, ಹಾಗೂ ಇತರೆ ಸಂಬಂಧಿಗಳು ಠಾಣೆಗೆ ಧಾವಿಸಿದ್ದಾರೆ. ನಟನನ್ನು ಸಂಜೆ ೩. ೩೦ ರ ವೇಳೆಗೆ ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಇವರನ್ನು ೧೪ ದಿನಗಳ ನ್ಯಾಯಾಂಗ ಬಂಧನದ ಆದೇಶ ಹೊರಡಿಸಿತ್ತು. ಹೀಗಾಗಿ ಅಲ್ಲು ಅವರನ್ನು ಚಂಚಲ್ ಗುಡ ಸೆಂಟ್ರಲ್ ಜೈಲಿಗೆ ಹಾಕಲಾಗಿತ್ತು. ಆದರೆ ತೆಲಂಗಾಣ ಹೈ ಕೋರ್ಟ್ ಮಧ್ಯ ಪ್ರವೇಶಿಸಿ ನಾಲ್ಕು ವಾರಗಳ ಜಾಮೀನು ನೀಡುವಂತೆ ಆದೇಶಿಸಿದೆ. ಆದರೆ ಅದಾಗಲೇ ರಾತ್ರಿಯಾದ್ದರಿಂದ ಶನಿವಾರ ಬೆಳಗ್ಗೆ ಅಲ್ಲೂ ಅರ್ಜುನ್ ರವರನ್ನು ಬಿಡುಗಡೆಗೊಳಿಸಲಾಗಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…