ಜನ ಮನದ ನಾಡಿ ಮಿಡಿತ

Advertisement

ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ. ಶೃತಿ ಬಲ್ಲಾಳ್‌ ಗೆ ಪ್ರತಿಷ್ಠಿತ ಮಿಸೆಸ್‌ ಅರ್ಥ್ ಇಂಟರ್‌ನ್ಯಾಶನಲ್‌ ಟೂರಿಸಂ -2024 ಅವಾರ್ಡ್

ಉಡುಪಿ: ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ. ಶೃತಿ ಬಲ್ಲಾಳ್‌ ಅವರು ಫಿಲಿಫೈನ್ಸ್‌ನ ಮನಿಲಾದಲ್ಲಿ ನಡೆದ ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಮಿಸೆಸ್‌ ಅರ್ಥ್ ಇಂಟರ್‌ನ್ಯಾಶನಲ್‌ ಟೂರಿಸಂ -2024 ಕಿರೀಟ ಗೆದ್ದುಕೊಂಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಶೃತಿ ಸ್ವತಃ ತಮ್ಮ ಅನುಭವ ಹಂಚಿಕೊಂಡರು.ಮಂಗಳೂರಿನ ಪಾತ್‌ವೇ ಎಂಟರ್‌ಪ್ರೈಸಸ್‌ನಿಂದ ಸೌಂದರ್ಯ ಸ್ಪರ್ಧೆಗೆ ತಾವು ಕಾಲಿಟ್ಟಿದ್ದು, ಮಂಗಳೂರು ವಲಯ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿಯನ್ನು ಗೆದ್ದುಕೊಂಡೆ. ನಂತರ ಬೆಂಗಳೂರಿನಲ್ಲಿ ಆಗಸ್ಟ್‌ ತಿಂಗಳಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಮಿಸೆಸ್‌ ಇಂಡಿಯಾ ಅರ್ತ್‌ ಇಂಟರ್‌ನ್ಯಾಶನಲ್ ಪ್ರಶಸ್ತಿಯನ್ನು ಗೆದ್ದು, ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾದೆ.ಆ ಬಳಿಕ ಮನಿಲಾದಲ್ಲಿ ನಡೆದ ಅಂತರಾಷ್ಟ್ರೀಯ ಸ್ಪರ್ಧೆಯು ಬಹಳ ಸವಾಲಿನದ್ದಾಗಿತ್ತು. ಇಲ್ಲಿ 10 ದಿನಗಳ ಕಾಲ ನಡೆದ ಸೌಂದರ್ಯದ ಜೊತೆಗೆ ಬುದ್ದಿಮತ್ತೆ, ದಯೆ, ಪರಿಸರದ ಬಗ್ಗೆ ತೋರಿದ ಬದ್ದತೆಯು ಜ್ಯೂರಿಗಳ ಗಮನ ಸೆಳೆದು ಈ ಪ್ರಶಸ್ತಿಯನ್ನು ಗೆದ್ದುಕೊಂಡೆ ಎಂದರು.

ಈ ಪ್ರಶಸ್ತಿಯೊಂದಿಗೆ ತನ್ನನ್ನು 5 ದೇಶಗಳಲ್ಲಿ ಪರಿಸರದ ಬಗ್ಗೆ ಜಾಗೃತಿಗಾಗಿ ಕೆಲಸ ಮಾಡಲು ಆಯ್ಕೆ ಮಾಡಲಾಗಿದೆ ಎಂದವರು ಸಂತಸ ವ್ಯಕ್ತಪಡಿಸಿದರು.

ಈ ಅಂತರಾಷ್ಟ್ರೀಯ ಸ್ಪರ್ಧೆಗೆ ತನ್ನನ್ನು ಆಸ್ಟ್ರಲ್‌ ಮಿಸೆಸ್‌ ಇಂಡಿಯಾದ ಕರ್ನಾಟಕ ನಿರ್ದೇಶಕಿ ಪ್ರತಿಭಾ ಸೌನ್ಶಿಮಠ್‌ ಅವರು ಮಾರ್ಗದರ್ಶನ ಮಾಡಿದ್ದರು ಎಂದು ಕೃತಜ್ಞತೆ ಸಲ್ಲಿಸಿದರು.ಸುದ್ದಿಗೋಷ್ಠಿಯಲ್ಲಿ ಪಾತ್‌ವೇ ಎಂಟರ್‌ಪ್ರೈಸಸ್‌ನ ದೀಪಕ್ ಗಂಗೂಲಿ ಮತ್ತು ಮರ್ಸಿ ಬ್ಯೂಟಿ ಅಕಾಡೆಮಿಯ ವೀಣಾ ಡಿಸೋಜ, ಅನಿಷಾ ಮತ್ತು ವಿನ್ಸೆಂಟ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!