ಉಡುಪಿ: ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ. ಶೃತಿ ಬಲ್ಲಾಳ್ ಅವರು ಫಿಲಿಫೈನ್ಸ್ನ ಮನಿಲಾದಲ್ಲಿ ನಡೆದ ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ -2024 ಕಿರೀಟ ಗೆದ್ದುಕೊಂಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಶೃತಿ ಸ್ವತಃ ತಮ್ಮ ಅನುಭವ ಹಂಚಿಕೊಂಡರು.ಮಂಗಳೂರಿನ ಪಾತ್ವೇ ಎಂಟರ್ಪ್ರೈಸಸ್ನಿಂದ ಸೌಂದರ್ಯ ಸ್ಪರ್ಧೆಗೆ ತಾವು ಕಾಲಿಟ್ಟಿದ್ದು, ಮಂಗಳೂರು ವಲಯ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿಯನ್ನು ಗೆದ್ದುಕೊಂಡೆ. ನಂತರ ಬೆಂಗಳೂರಿನಲ್ಲಿ ಆಗಸ್ಟ್ ತಿಂಗಳಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ ಅರ್ತ್ ಇಂಟರ್ನ್ಯಾಶನಲ್ ಪ್ರಶಸ್ತಿಯನ್ನು ಗೆದ್ದು, ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾದೆ.ಆ ಬಳಿಕ ಮನಿಲಾದಲ್ಲಿ ನಡೆದ ಅಂತರಾಷ್ಟ್ರೀಯ ಸ್ಪರ್ಧೆಯು ಬಹಳ ಸವಾಲಿನದ್ದಾಗಿತ್ತು. ಇಲ್ಲಿ 10 ದಿನಗಳ ಕಾಲ ನಡೆದ ಸೌಂದರ್ಯದ ಜೊತೆಗೆ ಬುದ್ದಿಮತ್ತೆ, ದಯೆ, ಪರಿಸರದ ಬಗ್ಗೆ ತೋರಿದ ಬದ್ದತೆಯು ಜ್ಯೂರಿಗಳ ಗಮನ ಸೆಳೆದು ಈ ಪ್ರಶಸ್ತಿಯನ್ನು ಗೆದ್ದುಕೊಂಡೆ ಎಂದರು.
ಈ ಪ್ರಶಸ್ತಿಯೊಂದಿಗೆ ತನ್ನನ್ನು 5 ದೇಶಗಳಲ್ಲಿ ಪರಿಸರದ ಬಗ್ಗೆ ಜಾಗೃತಿಗಾಗಿ ಕೆಲಸ ಮಾಡಲು ಆಯ್ಕೆ ಮಾಡಲಾಗಿದೆ ಎಂದವರು ಸಂತಸ ವ್ಯಕ್ತಪಡಿಸಿದರು.
ಈ ಅಂತರಾಷ್ಟ್ರೀಯ ಸ್ಪರ್ಧೆಗೆ ತನ್ನನ್ನು ಆಸ್ಟ್ರಲ್ ಮಿಸೆಸ್ ಇಂಡಿಯಾದ ಕರ್ನಾಟಕ ನಿರ್ದೇಶಕಿ ಪ್ರತಿಭಾ ಸೌನ್ಶಿಮಠ್ ಅವರು ಮಾರ್ಗದರ್ಶನ ಮಾಡಿದ್ದರು ಎಂದು ಕೃತಜ್ಞತೆ ಸಲ್ಲಿಸಿದರು.ಸುದ್ದಿಗೋಷ್ಠಿಯಲ್ಲಿ ಪಾತ್ವೇ ಎಂಟರ್ಪ್ರೈಸಸ್ನ ದೀಪಕ್ ಗಂಗೂಲಿ ಮತ್ತು ಮರ್ಸಿ ಬ್ಯೂಟಿ ಅಕಾಡೆಮಿಯ ವೀಣಾ ಡಿಸೋಜ, ಅನಿಷಾ ಮತ್ತು ವಿನ್ಸೆಂಟ್ ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…