ಉಡುಪಿ: ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ. ಶೃತಿ ಬಲ್ಲಾಳ್ ಅವರು ಫಿಲಿಫೈನ್ಸ್ನ ಮನಿಲಾದಲ್ಲಿ ನಡೆದ ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ -2024 ಕಿರೀಟ ಗೆದ್ದುಕೊಂಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಶೃತಿ ಸ್ವತಃ ತಮ್ಮ ಅನುಭವ ಹಂಚಿಕೊಂಡರು.ಮಂಗಳೂರಿನ ಪಾತ್ವೇ ಎಂಟರ್ಪ್ರೈಸಸ್ನಿಂದ ಸೌಂದರ್ಯ ಸ್ಪರ್ಧೆಗೆ ತಾವು ಕಾಲಿಟ್ಟಿದ್ದು, ಮಂಗಳೂರು ವಲಯ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿಯನ್ನು ಗೆದ್ದುಕೊಂಡೆ. ನಂತರ ಬೆಂಗಳೂರಿನಲ್ಲಿ ಆಗಸ್ಟ್ ತಿಂಗಳಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ ಅರ್ತ್ ಇಂಟರ್ನ್ಯಾಶನಲ್ ಪ್ರಶಸ್ತಿಯನ್ನು ಗೆದ್ದು, ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾದೆ.ಆ ಬಳಿಕ ಮನಿಲಾದಲ್ಲಿ ನಡೆದ ಅಂತರಾಷ್ಟ್ರೀಯ ಸ್ಪರ್ಧೆಯು ಬಹಳ ಸವಾಲಿನದ್ದಾಗಿತ್ತು. ಇಲ್ಲಿ 10 ದಿನಗಳ ಕಾಲ ನಡೆದ ಸೌಂದರ್ಯದ ಜೊತೆಗೆ ಬುದ್ದಿಮತ್ತೆ, ದಯೆ, ಪರಿಸರದ ಬಗ್ಗೆ ತೋರಿದ ಬದ್ದತೆಯು ಜ್ಯೂರಿಗಳ ಗಮನ ಸೆಳೆದು ಈ ಪ್ರಶಸ್ತಿಯನ್ನು ಗೆದ್ದುಕೊಂಡೆ ಎಂದರು.
ಈ ಪ್ರಶಸ್ತಿಯೊಂದಿಗೆ ತನ್ನನ್ನು 5 ದೇಶಗಳಲ್ಲಿ ಪರಿಸರದ ಬಗ್ಗೆ ಜಾಗೃತಿಗಾಗಿ ಕೆಲಸ ಮಾಡಲು ಆಯ್ಕೆ ಮಾಡಲಾಗಿದೆ ಎಂದವರು ಸಂತಸ ವ್ಯಕ್ತಪಡಿಸಿದರು.
ಈ ಅಂತರಾಷ್ಟ್ರೀಯ ಸ್ಪರ್ಧೆಗೆ ತನ್ನನ್ನು ಆಸ್ಟ್ರಲ್ ಮಿಸೆಸ್ ಇಂಡಿಯಾದ ಕರ್ನಾಟಕ ನಿರ್ದೇಶಕಿ ಪ್ರತಿಭಾ ಸೌನ್ಶಿಮಠ್ ಅವರು ಮಾರ್ಗದರ್ಶನ ಮಾಡಿದ್ದರು ಎಂದು ಕೃತಜ್ಞತೆ ಸಲ್ಲಿಸಿದರು.ಸುದ್ದಿಗೋಷ್ಠಿಯಲ್ಲಿ ಪಾತ್ವೇ ಎಂಟರ್ಪ್ರೈಸಸ್ನ ದೀಪಕ್ ಗಂಗೂಲಿ ಮತ್ತು ಮರ್ಸಿ ಬ್ಯೂಟಿ ಅಕಾಡೆಮಿಯ ವೀಣಾ ಡಿಸೋಜ, ಅನಿಷಾ ಮತ್ತು ವಿನ್ಸೆಂಟ್ ಉಪಸ್ಥಿತರಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…