ಉಡುಪಿ: ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ. ಶೃತಿ ಬಲ್ಲಾಳ್ ಅವರು ಫಿಲಿಫೈನ್ಸ್ನ ಮನಿಲಾದಲ್ಲಿ ನಡೆದ ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ -2024 ಕಿರೀಟ ಗೆದ್ದುಕೊಂಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಶೃತಿ ಸ್ವತಃ ತಮ್ಮ ಅನುಭವ ಹಂಚಿಕೊಂಡರು.ಮಂಗಳೂರಿನ ಪಾತ್ವೇ ಎಂಟರ್ಪ್ರೈಸಸ್ನಿಂದ ಸೌಂದರ್ಯ ಸ್ಪರ್ಧೆಗೆ ತಾವು ಕಾಲಿಟ್ಟಿದ್ದು, ಮಂಗಳೂರು ವಲಯ ಸ್ಪರ್ಧೆಯಲ್ಲಿ ಪ್ರಥಮ ಪ್ರಶಸ್ತಿಯನ್ನು ಗೆದ್ದುಕೊಂಡೆ. ನಂತರ ಬೆಂಗಳೂರಿನಲ್ಲಿ ಆಗಸ್ಟ್ ತಿಂಗಳಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ ಅರ್ತ್ ಇಂಟರ್ನ್ಯಾಶನಲ್ ಪ್ರಶಸ್ತಿಯನ್ನು ಗೆದ್ದು, ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾದೆ.ಆ ಬಳಿಕ ಮನಿಲಾದಲ್ಲಿ ನಡೆದ ಅಂತರಾಷ್ಟ್ರೀಯ ಸ್ಪರ್ಧೆಯು ಬಹಳ ಸವಾಲಿನದ್ದಾಗಿತ್ತು. ಇಲ್ಲಿ 10 ದಿನಗಳ ಕಾಲ ನಡೆದ ಸೌಂದರ್ಯದ ಜೊತೆಗೆ ಬುದ್ದಿಮತ್ತೆ, ದಯೆ, ಪರಿಸರದ ಬಗ್ಗೆ ತೋರಿದ ಬದ್ದತೆಯು ಜ್ಯೂರಿಗಳ ಗಮನ ಸೆಳೆದು ಈ ಪ್ರಶಸ್ತಿಯನ್ನು ಗೆದ್ದುಕೊಂಡೆ ಎಂದರು.
ಈ ಪ್ರಶಸ್ತಿಯೊಂದಿಗೆ ತನ್ನನ್ನು 5 ದೇಶಗಳಲ್ಲಿ ಪರಿಸರದ ಬಗ್ಗೆ ಜಾಗೃತಿಗಾಗಿ ಕೆಲಸ ಮಾಡಲು ಆಯ್ಕೆ ಮಾಡಲಾಗಿದೆ ಎಂದವರು ಸಂತಸ ವ್ಯಕ್ತಪಡಿಸಿದರು.
ಈ ಅಂತರಾಷ್ಟ್ರೀಯ ಸ್ಪರ್ಧೆಗೆ ತನ್ನನ್ನು ಆಸ್ಟ್ರಲ್ ಮಿಸೆಸ್ ಇಂಡಿಯಾದ ಕರ್ನಾಟಕ ನಿರ್ದೇಶಕಿ ಪ್ರತಿಭಾ ಸೌನ್ಶಿಮಠ್ ಅವರು ಮಾರ್ಗದರ್ಶನ ಮಾಡಿದ್ದರು ಎಂದು ಕೃತಜ್ಞತೆ ಸಲ್ಲಿಸಿದರು.ಸುದ್ದಿಗೋಷ್ಠಿಯಲ್ಲಿ ಪಾತ್ವೇ ಎಂಟರ್ಪ್ರೈಸಸ್ನ ದೀಪಕ್ ಗಂಗೂಲಿ ಮತ್ತು ಮರ್ಸಿ ಬ್ಯೂಟಿ ಅಕಾಡೆಮಿಯ ವೀಣಾ ಡಿಸೋಜ, ಅನಿಷಾ ಮತ್ತು ವಿನ್ಸೆಂಟ್ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…