ಜನ ಮನದ ನಾಡಿ ಮಿಡಿತ

Advertisement

ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸುದ್ದಿಗೋಷ್ಟಿಯಲ್ಲಿ ಮಾತಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದೇ ಜುಲೈ 17 ರಂದು ಯೋಜನೆಗೆ ಆಪ್ ಚಾಲನೆ ನೀಡಿ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.
ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆಯು ಯೋಜನೆಯ ಫಲಾನುಭವಿಯಾಗಿದ್ದಾರೆ. ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ. ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ಅರ್ಜಿ ಸಲ್ಲಿಕೆಯ ದಿನಾಂಕ, ಸಮಯ ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರಗಳನ್ನು . ಮೂಲಕ ತಿಳಿಸಿ ಗ್ರಾಮಾಂತರ ಪ್ರದೇಶದಲ್ಲಿರುವವರು ತಾವು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ಮತ್ತು ನಗರ ಪ್ರದೇಶದಲ್ಲಿರುವವರು ಅವರ ಸಮೀಪವಿರುವ ಕರ್ನಾಟಕ-ಒನ್, ಬೆಂಗಳೂರು-ಒನ್, ಬಿಬಿಎಂಪಿ ವಾರ್ಡ್ ಕಚೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು. ಪರ್ಯಾಯವಾಗಿ “ಪ್ರಜಾಪ್ರತಿನಿಧಿ” ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ಮಹಿಳೆಯರು ನೋಂದಾಯಿಸಿಕೊಳ್ಳಬಹುದು. ಯೋಜನೆಯಡಿ ನೋಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ ಬುಕ್‌ ನಂಬರ್ ಜೋಡಣೆಯಾಗಿರುವ ಮಾಹಿತಿಯನ್ನು ಫಲಾನುಭವಿಗಳು ಕೊಡಬೇಕು. ಕೇಂದ್ರದಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ಕೂಡಲೇ ನೀಡಲಾಗುತ್ತಿದ್ದು ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ಕಳುಹಿಸಲಾಗುವುದು ಎಂದು ಹೇಳಿದರು. ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಹೋದಲ್ಲಿ, ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!