ಜನ ಮನದ ನಾಡಿ ಮಿಡಿತ

Advertisement

ಬೆಣ್ಣೆಕುದ್ರು ಕುಲಮಹಾಸ್ತ್ರೀ ಅಮ್ಮನವರ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

ಉಡುಪಿ: ಕರಾವಳಿಯಲ್ಲಿ ಮೀನುಗಾರಿಕಾ ವೃತ್ತಿ ಮಾಡುವ ಮೊಗವೀರ ಸಮುದಾಯದ ಬಾರ್ಕೂರು ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ನಡೆಯಿತು.

 


ಈ ಪ್ರಯುಕ್ತ ನಡೆದ ತೆಪ್ಪೋತ್ಸವ (ಹೊಳೆಯಾನ ) ವಿಶೇಷವಾಗಿತ್ತು. ಶ್ರೀ ಕುಲಮಹಾಸ್ತ್ರಿ ಅಮ್ಮನವರ ಉತ್ಸವ ಮೂರ್ತಿಯನ್ನು ಪುಷ್ಪಾಲಂಕಾರ ಹಾಗೂ ವಿದ್ಯುದ್ವಿಪಾಲಂಕರದಿಂದ ಅಲಂಕರಿಸಿದ ಸಂಗಡ ಕಟ್ಟಿದ ಜೋಡಿ ದೋಣಿಯಲ್ಲಿ ಕೊಂಡೊಯ್ಯಲಾಯಿತು.
ರಜತ ಪಲ್ಲಕ್ಕಿಯಲ್ಲಿ ಇರಿಸಿ ಭಜನೆ, ವಾದ್ಯ ಘೋಷ, ಆಕರ್ಷಕ ಸಿಡಿಮದ್ದು ಪ್ರದರ್ಶನದೊಂದಿಗೆ ರಾತ್ರಿ 11 ಗಂಟೆಗೆಯಿಂದ ಪ್ರಾರಂಭಗೊಂಡು ಸರಿ ಸುಮಾರು 2 ಗಂಟೆಯ ಅವಧಿಯಲ್ಲಿ ಹರಿಯುವ ನೀರಲ್ಲಿ ದೇವರ ಮೆರವಣಿಗೆ ನಡೆಯಿತು . ನಡುಗಡ್ಡೆಯಾದ ಬೆಣ್ಣೆಕುದ್ರು ಗೆ ಒಂದು ಪ್ರದಕ್ಷಿಣೆ ತರಲಾಯ್ತು. ಈ ತೆಪ್ಪೋತ್ಸವ ನೋಡಲು ಸಾವಿರಾರು ಮಂದಿ ಸೇರಿದ್ದು ಕಣ್ಣಿಗೆ ಹಬ್ಬವಾಗಿತ್ತು.
ಈ ಬಾರಿ ಡ್ರೋನ್ ಮೂಲಕ ಶ್ರೀ ಕುಲ ಮಹಾಸ್ತ್ರೀ ಅಮ್ಮ ನವರ ಉತ್ಸವ ಮೂರ್ತಿ ಗೆ ಪುಷ್ಪಾರ್ಚನೆ ಗೈಯಲಾಯಿತು. ಹಲವಾರು ದೋಣಿಗಳು ತೆಪ್ಪೋತ್ಸವದಲ್ಲಿ ಸಾಗಿ ಬಂದದ್ದು ವಿಶೇಷ ಆಕರ್ಷಣೆಯಾಗಿತ್ತು. ಸಹಸ್ರಾರು ಮಂದಿ ಈ ತೆಪ್ಪೋತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!