ಜನ ಮನದ ನಾಡಿ ಮಿಡಿತ

Advertisement

ಬೆಣ್ಣೆಕುದ್ರು ಕುಲಮಹಾಸ್ತ್ರೀ ಅಮ್ಮನವರ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

ಉಡುಪಿ: ಕರಾವಳಿಯಲ್ಲಿ ಮೀನುಗಾರಿಕಾ ವೃತ್ತಿ ಮಾಡುವ ಮೊಗವೀರ ಸಮುದಾಯದ ಬಾರ್ಕೂರು ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ನಡೆಯಿತು.

 


ಈ ಪ್ರಯುಕ್ತ ನಡೆದ ತೆಪ್ಪೋತ್ಸವ (ಹೊಳೆಯಾನ ) ವಿಶೇಷವಾಗಿತ್ತು. ಶ್ರೀ ಕುಲಮಹಾಸ್ತ್ರಿ ಅಮ್ಮನವರ ಉತ್ಸವ ಮೂರ್ತಿಯನ್ನು ಪುಷ್ಪಾಲಂಕಾರ ಹಾಗೂ ವಿದ್ಯುದ್ವಿಪಾಲಂಕರದಿಂದ ಅಲಂಕರಿಸಿದ ಸಂಗಡ ಕಟ್ಟಿದ ಜೋಡಿ ದೋಣಿಯಲ್ಲಿ ಕೊಂಡೊಯ್ಯಲಾಯಿತು.
ರಜತ ಪಲ್ಲಕ್ಕಿಯಲ್ಲಿ ಇರಿಸಿ ಭಜನೆ, ವಾದ್ಯ ಘೋಷ, ಆಕರ್ಷಕ ಸಿಡಿಮದ್ದು ಪ್ರದರ್ಶನದೊಂದಿಗೆ ರಾತ್ರಿ 11 ಗಂಟೆಗೆಯಿಂದ ಪ್ರಾರಂಭಗೊಂಡು ಸರಿ ಸುಮಾರು 2 ಗಂಟೆಯ ಅವಧಿಯಲ್ಲಿ ಹರಿಯುವ ನೀರಲ್ಲಿ ದೇವರ ಮೆರವಣಿಗೆ ನಡೆಯಿತು . ನಡುಗಡ್ಡೆಯಾದ ಬೆಣ್ಣೆಕುದ್ರು ಗೆ ಒಂದು ಪ್ರದಕ್ಷಿಣೆ ತರಲಾಯ್ತು. ಈ ತೆಪ್ಪೋತ್ಸವ ನೋಡಲು ಸಾವಿರಾರು ಮಂದಿ ಸೇರಿದ್ದು ಕಣ್ಣಿಗೆ ಹಬ್ಬವಾಗಿತ್ತು.
ಈ ಬಾರಿ ಡ್ರೋನ್ ಮೂಲಕ ಶ್ರೀ ಕುಲ ಮಹಾಸ್ತ್ರೀ ಅಮ್ಮ ನವರ ಉತ್ಸವ ಮೂರ್ತಿ ಗೆ ಪುಷ್ಪಾರ್ಚನೆ ಗೈಯಲಾಯಿತು. ಹಲವಾರು ದೋಣಿಗಳು ತೆಪ್ಪೋತ್ಸವದಲ್ಲಿ ಸಾಗಿ ಬಂದದ್ದು ವಿಶೇಷ ಆಕರ್ಷಣೆಯಾಗಿತ್ತು. ಸಹಸ್ರಾರು ಮಂದಿ ಈ ತೆಪ್ಪೋತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!