ಕರಾವಳಿ

ಬೆಣ್ಣೆಕುದ್ರು ಕುಲಮಹಾಸ್ತ್ರೀ ಅಮ್ಮನವರ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

ಉಡುಪಿ: ಕರಾವಳಿಯಲ್ಲಿ ಮೀನುಗಾರಿಕಾ ವೃತ್ತಿ ಮಾಡುವ ಮೊಗವೀರ ಸಮುದಾಯದ ಬಾರ್ಕೂರು ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ನಡೆಯಿತು.

 


ಈ ಪ್ರಯುಕ್ತ ನಡೆದ ತೆಪ್ಪೋತ್ಸವ (ಹೊಳೆಯಾನ ) ವಿಶೇಷವಾಗಿತ್ತು. ಶ್ರೀ ಕುಲಮಹಾಸ್ತ್ರಿ ಅಮ್ಮನವರ ಉತ್ಸವ ಮೂರ್ತಿಯನ್ನು ಪುಷ್ಪಾಲಂಕಾರ ಹಾಗೂ ವಿದ್ಯುದ್ವಿಪಾಲಂಕರದಿಂದ ಅಲಂಕರಿಸಿದ ಸಂಗಡ ಕಟ್ಟಿದ ಜೋಡಿ ದೋಣಿಯಲ್ಲಿ ಕೊಂಡೊಯ್ಯಲಾಯಿತು.
ರಜತ ಪಲ್ಲಕ್ಕಿಯಲ್ಲಿ ಇರಿಸಿ ಭಜನೆ, ವಾದ್ಯ ಘೋಷ, ಆಕರ್ಷಕ ಸಿಡಿಮದ್ದು ಪ್ರದರ್ಶನದೊಂದಿಗೆ ರಾತ್ರಿ 11 ಗಂಟೆಗೆಯಿಂದ ಪ್ರಾರಂಭಗೊಂಡು ಸರಿ ಸುಮಾರು 2 ಗಂಟೆಯ ಅವಧಿಯಲ್ಲಿ ಹರಿಯುವ ನೀರಲ್ಲಿ ದೇವರ ಮೆರವಣಿಗೆ ನಡೆಯಿತು . ನಡುಗಡ್ಡೆಯಾದ ಬೆಣ್ಣೆಕುದ್ರು ಗೆ ಒಂದು ಪ್ರದಕ್ಷಿಣೆ ತರಲಾಯ್ತು. ಈ ತೆಪ್ಪೋತ್ಸವ ನೋಡಲು ಸಾವಿರಾರು ಮಂದಿ ಸೇರಿದ್ದು ಕಣ್ಣಿಗೆ ಹಬ್ಬವಾಗಿತ್ತು.
ಈ ಬಾರಿ ಡ್ರೋನ್ ಮೂಲಕ ಶ್ರೀ ಕುಲ ಮಹಾಸ್ತ್ರೀ ಅಮ್ಮ ನವರ ಉತ್ಸವ ಮೂರ್ತಿ ಗೆ ಪುಷ್ಪಾರ್ಚನೆ ಗೈಯಲಾಯಿತು. ಹಲವಾರು ದೋಣಿಗಳು ತೆಪ್ಪೋತ್ಸವದಲ್ಲಿ ಸಾಗಿ ಬಂದದ್ದು ವಿಶೇಷ ಆಕರ್ಷಣೆಯಾಗಿತ್ತು. ಸಹಸ್ರಾರು ಮಂದಿ ಈ ತೆಪ್ಪೋತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

3 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

3 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

3 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

3 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

3 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

3 days ago