ಉಡುಪಿ: ಕರಾವಳಿಯಲ್ಲಿ ಮೀನುಗಾರಿಕಾ ವೃತ್ತಿ ಮಾಡುವ ಮೊಗವೀರ ಸಮುದಾಯದ ಬಾರ್ಕೂರು ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ನಡೆಯಿತು.
ಈ ಪ್ರಯುಕ್ತ ನಡೆದ ತೆಪ್ಪೋತ್ಸವ (ಹೊಳೆಯಾನ ) ವಿಶೇಷವಾಗಿತ್ತು. ಶ್ರೀ ಕುಲಮಹಾಸ್ತ್ರಿ ಅಮ್ಮನವರ ಉತ್ಸವ ಮೂರ್ತಿಯನ್ನು ಪುಷ್ಪಾಲಂಕಾರ ಹಾಗೂ ವಿದ್ಯುದ್ವಿಪಾಲಂಕರದಿಂದ ಅಲಂಕರಿಸಿದ ಸಂಗಡ ಕಟ್ಟಿದ ಜೋಡಿ ದೋಣಿಯಲ್ಲಿ ಕೊಂಡೊಯ್ಯಲಾಯಿತು.
ರಜತ ಪಲ್ಲಕ್ಕಿಯಲ್ಲಿ ಇರಿಸಿ ಭಜನೆ, ವಾದ್ಯ ಘೋಷ, ಆಕರ್ಷಕ ಸಿಡಿಮದ್ದು ಪ್ರದರ್ಶನದೊಂದಿಗೆ ರಾತ್ರಿ 11 ಗಂಟೆಗೆಯಿಂದ ಪ್ರಾರಂಭಗೊಂಡು ಸರಿ ಸುಮಾರು 2 ಗಂಟೆಯ ಅವಧಿಯಲ್ಲಿ ಹರಿಯುವ ನೀರಲ್ಲಿ ದೇವರ ಮೆರವಣಿಗೆ ನಡೆಯಿತು . ನಡುಗಡ್ಡೆಯಾದ ಬೆಣ್ಣೆಕುದ್ರು ಗೆ ಒಂದು ಪ್ರದಕ್ಷಿಣೆ ತರಲಾಯ್ತು. ಈ ತೆಪ್ಪೋತ್ಸವ ನೋಡಲು ಸಾವಿರಾರು ಮಂದಿ ಸೇರಿದ್ದು ಕಣ್ಣಿಗೆ ಹಬ್ಬವಾಗಿತ್ತು.
ಈ ಬಾರಿ ಡ್ರೋನ್ ಮೂಲಕ ಶ್ರೀ ಕುಲ ಮಹಾಸ್ತ್ರೀ ಅಮ್ಮ ನವರ ಉತ್ಸವ ಮೂರ್ತಿ ಗೆ ಪುಷ್ಪಾರ್ಚನೆ ಗೈಯಲಾಯಿತು. ಹಲವಾರು ದೋಣಿಗಳು ತೆಪ್ಪೋತ್ಸವದಲ್ಲಿ ಸಾಗಿ ಬಂದದ್ದು ವಿಶೇಷ ಆಕರ್ಷಣೆಯಾಗಿತ್ತು. ಸಹಸ್ರಾರು ಮಂದಿ ಈ ತೆಪ್ಪೋತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…