ಉಡುಪಿ: ಕರಾವಳಿಯಲ್ಲಿ ಮೀನುಗಾರಿಕಾ ವೃತ್ತಿ ಮಾಡುವ ಮೊಗವೀರ ಸಮುದಾಯದ ಬಾರ್ಕೂರು ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ನಡೆಯಿತು.
ಈ ಪ್ರಯುಕ್ತ ನಡೆದ ತೆಪ್ಪೋತ್ಸವ (ಹೊಳೆಯಾನ ) ವಿಶೇಷವಾಗಿತ್ತು. ಶ್ರೀ ಕುಲಮಹಾಸ್ತ್ರಿ ಅಮ್ಮನವರ ಉತ್ಸವ ಮೂರ್ತಿಯನ್ನು ಪುಷ್ಪಾಲಂಕಾರ ಹಾಗೂ ವಿದ್ಯುದ್ವಿಪಾಲಂಕರದಿಂದ ಅಲಂಕರಿಸಿದ ಸಂಗಡ ಕಟ್ಟಿದ ಜೋಡಿ ದೋಣಿಯಲ್ಲಿ ಕೊಂಡೊಯ್ಯಲಾಯಿತು.
ರಜತ ಪಲ್ಲಕ್ಕಿಯಲ್ಲಿ ಇರಿಸಿ ಭಜನೆ, ವಾದ್ಯ ಘೋಷ, ಆಕರ್ಷಕ ಸಿಡಿಮದ್ದು ಪ್ರದರ್ಶನದೊಂದಿಗೆ ರಾತ್ರಿ 11 ಗಂಟೆಗೆಯಿಂದ ಪ್ರಾರಂಭಗೊಂಡು ಸರಿ ಸುಮಾರು 2 ಗಂಟೆಯ ಅವಧಿಯಲ್ಲಿ ಹರಿಯುವ ನೀರಲ್ಲಿ ದೇವರ ಮೆರವಣಿಗೆ ನಡೆಯಿತು . ನಡುಗಡ್ಡೆಯಾದ ಬೆಣ್ಣೆಕುದ್ರು ಗೆ ಒಂದು ಪ್ರದಕ್ಷಿಣೆ ತರಲಾಯ್ತು. ಈ ತೆಪ್ಪೋತ್ಸವ ನೋಡಲು ಸಾವಿರಾರು ಮಂದಿ ಸೇರಿದ್ದು ಕಣ್ಣಿಗೆ ಹಬ್ಬವಾಗಿತ್ತು.
ಈ ಬಾರಿ ಡ್ರೋನ್ ಮೂಲಕ ಶ್ರೀ ಕುಲ ಮಹಾಸ್ತ್ರೀ ಅಮ್ಮ ನವರ ಉತ್ಸವ ಮೂರ್ತಿ ಗೆ ಪುಷ್ಪಾರ್ಚನೆ ಗೈಯಲಾಯಿತು. ಹಲವಾರು ದೋಣಿಗಳು ತೆಪ್ಪೋತ್ಸವದಲ್ಲಿ ಸಾಗಿ ಬಂದದ್ದು ವಿಶೇಷ ಆಕರ್ಷಣೆಯಾಗಿತ್ತು. ಸಹಸ್ರಾರು ಮಂದಿ ಈ ತೆಪ್ಪೋತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…