ಉಡುಪಿ: ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನವರಿ 10ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲು 2018 ರಿಂದಲೇ ಕಾಮಗಾರಿಗಳನ್ನು ಕೈಗೊಳ್ಳಲು ಪತ್ರ ವ್ಯವಹಾರಗಳು ನಡೆದಿದ್ದವು, ಕಳೆದ ಮೂರು ವರ್ಷದಿಂದ ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡಿದ್ದರೂ ಸಹ ನಿಗಧಿತ ಕಾಲಾವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸದೇ ಇರುವುದರಿಂದ ಸಾರ್ವಜನಿಕ ಸಂಚಾರಕ್ಕೆ ಹೆಚ್ಚಿನ ವ್ಯತ್ಯಯ ಉಂಟಾಗಿ ಪ್ರತೀ ದಿನವೂ ಜಿಲ್ಲಾಡಳಿತಕ್ಕೆ ದೂರುಗಳು ಕೇಳಿ ಬರುತ್ತಿವೆ. ಹಾಗೂ ಅಪಘಾತಗಳು ಸಹ ಕಾಮಗಾರಿಯ ವಿಳಂಬದಿAದಾಗಿ ಉಂಟಾಗಿವೆ. ಇವಕ್ಕೆಲ್ಲಾ ಅಭಿಯಂತರರುಗಳು, ಗುತ್ತಿಗೆದಾರರೇ ಕಾರಣ ಎಂದು ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಕಾಮಗಾರಿಯನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಪ್ರತೀ ವಾರಕ್ಕೊಮ್ಮೆ ಕಾಮಗಾರಿ ಪ್ರಕ್ರಿಯೆಯ ಮಾಹಿತಿಯನ್ನು ನೀಡುವಂತೆ ಸೂಚನೆ ನೀಡಿದರು.
ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲು ಈಗಾಗಲೇ ರೈಲ್ವೆ ಇಲಾಖೆಯ ವತಿಯಿಂದ ಅನುಮತಿಯನ್ನು ನೀಡಲಾಗಿದ್ದು, ಸಿವಿಲ್ ಕಾಮಗಾರಿ ಹಾಗೂ ಕಬ್ಬಿಣದ ಬ್ರಿಡ್ಜ್ನ ಜೋಡಣೆ ಕಾಮಗಾರಿಗಳನ್ನು ಹಗಲು ಹಾಗೂ ರಾತ್ರಿ ಎರಡು ಪಾಳಯದಲ್ಲಿ ಕಾರ್ಮಿಕರನ್ನು ನಿಯೋಜಿಸಿ, ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಕಾಮಗಾರಿಯನ್ನು ಕೈಗೊಳ್ಳುವಾಗ ಸುರಕ್ಷತೆಗೆ ಆದ್ಯತೆಯನ್ನು ನೀಡಬೇಕು. ರೈಲು ಸಾಗಾಣಿಕೆಗೆ ಯಾವುದೇ ತೊಂದರೆ ಆಗದಂತೆ ನಿಗಾ ವಹಿಸಬೇಕು ಎಂದ ಅವರು ಜನವರಿ 7 ರ ಒಳಗಾಗಿ ಪೂರ್ಣ ಪ್ರಮಾಣದಲ್ಲಿ ಕಾಮಗಾರಿಗಳನ್ನು ಸಂಪೂರ್ಣವಾಗಿ ಮುಗಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕೊಂಕಣ ರೈಲ್ವೆಯ ಸೀನೀಯರ್ ಇಂಜಿನಿಯರ್ ಗೋಪಾಲ ಕೃಷ್ಣ, ಶೃಂಗೇರಿ-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…