ಜನ ಮನದ ನಾಡಿ ಮಿಡಿತ

Advertisement

ಹಿರಿಯ ನೃತ್ಯಗುರು ಕಮಲ ಭಟ್ ವಿಧಿ ವಶ

ಮಂಗಳೂರು: ಖ್ಯಾತ ನೃತ್ಯ ಗುರು ಕರ್ನಾಟಕ ಕಲಾಶ್ರೀ ಪುರಸ್ಕೃತ ವಿಧುಷಿ ಕಮಲಾ ಭಟ್ (7೦) ಅವರು ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ.


ನಾಟ್ಯಾಲಯ ಊರ್ವ ಸಂಸ್ಥೆಯ ನಿರ್ದೇಶಕರಾಗಿದ್ದ ಕಮಲಾಭಟ್ ಅವರು ಸುಮಾರು ೪೫ ವರ್ಷಗಳಿಂದ ನೃತ್ಯ ಸೇವೆಯಲ್ಲಿ ತೊಡಗಿದ್ದರು.
ಕರ್ನಾಟಕ ಕಲಾಶ್ರೀ, ಪೇಜಾವರ ಶ್ರೀ ವಿಶ್ವೇಶ್ವರ ಶ್ರೀಪಾದರಿಂದ ಶ್ರೀ ರಾಮ ವಿಠಲ ಪುರಸ್ಕಾರ, ಶೃಂಗೇರಿ ಸಂಸ್ಥಾನದಿಂದ ಸನ್ಮಾನ, ಕಲ್ಕೂರ ಪ್ರತಿಷ್ಠಾನದಿಂದ ರಾಜ್ಯೋತ್ಸವ ಗೌರವ ಪುರಸ್ಕಾರ, ಬಿಲ್ಲವ ಸಂಘ ಅಶೋಕನಗರ ಸಂಘಟನೆಯಿಂದ ಪುರಸ್ಕಾರ, ನಾಟ್ಯಕಲಾನಿಧಿ, ನಾಟ್ಯಕಲಾ ಸಂಪನ್ನೇ, ನಾಟ್ಯ ವಿಶಾರದೆ, ರೋಟರಿ ಲಯನ್ ಸಂಸ್ಥೆಗಳಿಂದ ಪುರಸ್ಕಾರಗಳು, ಸಾರ್ವಜನಿಕವಾಗಿ ಜೀವಮಾನ ಸಾಧನೆಗಾಗಿ ’ಸಾರ್ಥಕ ’ ಗೌರವ ಸನ್ಮಾನ. ಮೊದಲಾದ ಗೌರವ ಪುರಸ್ಕಾರಗಳಿಂದ ಗೌರವಿಸಲ್ಪಟ್ಟಿದ್ದರು. ಭರತಾಂಜಲಿ ನೃತ್ಯ ಸಂಸ್ಥೆ ಕೊಟ್ಟಾರ, ನೃತ್ಯ ಸುಧಾ ಮೇರಿಹಿಲ್, ಚಿಗುರು ನೃತ್ಯ ಸಂಸ್ಥೆ ಬೆಂಗಳೂರು ಸಂಸ್ಥೆಗಳ ಮಾರ್ಗದರ್ಶಕರಾಗಿದ್ದರು.
ನಾಟ್ಯಕಲೆಯ ಪಾವಿತ್ರ್ಯತೆಯನ್ನು ಕರಗತಗೊಳಿಸುತ್ತಾ ನಾವಿನ್ಯತೆಗಳನ್ನು ಸೃಷ್ಟಿಸಿದ ನೃತ್ಯ ಕ್ಷೇತ್ರದ ಅಜಾತ ಶತ್ರು ನೃತ್ಯ ಗುರುವಾಗಿದ್ದ ಕಮಲ ಭಟ್ ಆಗಲಿಕಗೆ ಗಣ್ಯೆರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಗ ಸೇರಿದಂತೆ ಅಪಾರ ಶಿಷ್ಯವರ್ಗವನ್ನು ಅವರು ಆಗಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!