ಮಂಗಳೂರು: ಖ್ಯಾತ ನೃತ್ಯ ಗುರು ಕರ್ನಾಟಕ ಕಲಾಶ್ರೀ ಪುರಸ್ಕೃತ ವಿಧುಷಿ ಕಮಲಾ ಭಟ್ (7೦) ಅವರು ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ.
ನಾಟ್ಯಾಲಯ ಊರ್ವ ಸಂಸ್ಥೆಯ ನಿರ್ದೇಶಕರಾಗಿದ್ದ ಕಮಲಾಭಟ್ ಅವರು ಸುಮಾರು ೪೫ ವರ್ಷಗಳಿಂದ ನೃತ್ಯ ಸೇವೆಯಲ್ಲಿ ತೊಡಗಿದ್ದರು.
ಕರ್ನಾಟಕ ಕಲಾಶ್ರೀ, ಪೇಜಾವರ ಶ್ರೀ ವಿಶ್ವೇಶ್ವರ ಶ್ರೀಪಾದರಿಂದ ಶ್ರೀ ರಾಮ ವಿಠಲ ಪುರಸ್ಕಾರ, ಶೃಂಗೇರಿ ಸಂಸ್ಥಾನದಿಂದ ಸನ್ಮಾನ, ಕಲ್ಕೂರ ಪ್ರತಿಷ್ಠಾನದಿಂದ ರಾಜ್ಯೋತ್ಸವ ಗೌರವ ಪುರಸ್ಕಾರ, ಬಿಲ್ಲವ ಸಂಘ ಅಶೋಕನಗರ ಸಂಘಟನೆಯಿಂದ ಪುರಸ್ಕಾರ, ನಾಟ್ಯಕಲಾನಿಧಿ, ನಾಟ್ಯಕಲಾ ಸಂಪನ್ನೇ, ನಾಟ್ಯ ವಿಶಾರದೆ, ರೋಟರಿ ಲಯನ್ ಸಂಸ್ಥೆಗಳಿಂದ ಪುರಸ್ಕಾರಗಳು, ಸಾರ್ವಜನಿಕವಾಗಿ ಜೀವಮಾನ ಸಾಧನೆಗಾಗಿ ’ಸಾರ್ಥಕ ’ ಗೌರವ ಸನ್ಮಾನ. ಮೊದಲಾದ ಗೌರವ ಪುರಸ್ಕಾರಗಳಿಂದ ಗೌರವಿಸಲ್ಪಟ್ಟಿದ್ದರು. ಭರತಾಂಜಲಿ ನೃತ್ಯ ಸಂಸ್ಥೆ ಕೊಟ್ಟಾರ, ನೃತ್ಯ ಸುಧಾ ಮೇರಿಹಿಲ್, ಚಿಗುರು ನೃತ್ಯ ಸಂಸ್ಥೆ ಬೆಂಗಳೂರು ಸಂಸ್ಥೆಗಳ ಮಾರ್ಗದರ್ಶಕರಾಗಿದ್ದರು.
ನಾಟ್ಯಕಲೆಯ ಪಾವಿತ್ರ್ಯತೆಯನ್ನು ಕರಗತಗೊಳಿಸುತ್ತಾ ನಾವಿನ್ಯತೆಗಳನ್ನು ಸೃಷ್ಟಿಸಿದ ನೃತ್ಯ ಕ್ಷೇತ್ರದ ಅಜಾತ ಶತ್ರು ನೃತ್ಯ ಗುರುವಾಗಿದ್ದ ಕಮಲ ಭಟ್ ಆಗಲಿಕಗೆ ಗಣ್ಯೆರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಗ ಸೇರಿದಂತೆ ಅಪಾರ ಶಿಷ್ಯವರ್ಗವನ್ನು ಅವರು ಆಗಲಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…