ಮಂಗಳೂರು: ಖ್ಯಾತ ನೃತ್ಯ ಗುರು ಕರ್ನಾಟಕ ಕಲಾಶ್ರೀ ಪುರಸ್ಕೃತ ವಿಧುಷಿ ಕಮಲಾ ಭಟ್ (7೦) ಅವರು ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ.
ನಾಟ್ಯಾಲಯ ಊರ್ವ ಸಂಸ್ಥೆಯ ನಿರ್ದೇಶಕರಾಗಿದ್ದ ಕಮಲಾಭಟ್ ಅವರು ಸುಮಾರು ೪೫ ವರ್ಷಗಳಿಂದ ನೃತ್ಯ ಸೇವೆಯಲ್ಲಿ ತೊಡಗಿದ್ದರು.
ಕರ್ನಾಟಕ ಕಲಾಶ್ರೀ, ಪೇಜಾವರ ಶ್ರೀ ವಿಶ್ವೇಶ್ವರ ಶ್ರೀಪಾದರಿಂದ ಶ್ರೀ ರಾಮ ವಿಠಲ ಪುರಸ್ಕಾರ, ಶೃಂಗೇರಿ ಸಂಸ್ಥಾನದಿಂದ ಸನ್ಮಾನ, ಕಲ್ಕೂರ ಪ್ರತಿಷ್ಠಾನದಿಂದ ರಾಜ್ಯೋತ್ಸವ ಗೌರವ ಪುರಸ್ಕಾರ, ಬಿಲ್ಲವ ಸಂಘ ಅಶೋಕನಗರ ಸಂಘಟನೆಯಿಂದ ಪುರಸ್ಕಾರ, ನಾಟ್ಯಕಲಾನಿಧಿ, ನಾಟ್ಯಕಲಾ ಸಂಪನ್ನೇ, ನಾಟ್ಯ ವಿಶಾರದೆ, ರೋಟರಿ ಲಯನ್ ಸಂಸ್ಥೆಗಳಿಂದ ಪುರಸ್ಕಾರಗಳು, ಸಾರ್ವಜನಿಕವಾಗಿ ಜೀವಮಾನ ಸಾಧನೆಗಾಗಿ ’ಸಾರ್ಥಕ ’ ಗೌರವ ಸನ್ಮಾನ. ಮೊದಲಾದ ಗೌರವ ಪುರಸ್ಕಾರಗಳಿಂದ ಗೌರವಿಸಲ್ಪಟ್ಟಿದ್ದರು. ಭರತಾಂಜಲಿ ನೃತ್ಯ ಸಂಸ್ಥೆ ಕೊಟ್ಟಾರ, ನೃತ್ಯ ಸುಧಾ ಮೇರಿಹಿಲ್, ಚಿಗುರು ನೃತ್ಯ ಸಂಸ್ಥೆ ಬೆಂಗಳೂರು ಸಂಸ್ಥೆಗಳ ಮಾರ್ಗದರ್ಶಕರಾಗಿದ್ದರು.
ನಾಟ್ಯಕಲೆಯ ಪಾವಿತ್ರ್ಯತೆಯನ್ನು ಕರಗತಗೊಳಿಸುತ್ತಾ ನಾವಿನ್ಯತೆಗಳನ್ನು ಸೃಷ್ಟಿಸಿದ ನೃತ್ಯ ಕ್ಷೇತ್ರದ ಅಜಾತ ಶತ್ರು ನೃತ್ಯ ಗುರುವಾಗಿದ್ದ ಕಮಲ ಭಟ್ ಆಗಲಿಕಗೆ ಗಣ್ಯೆರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಗ ಸೇರಿದಂತೆ ಅಪಾರ ಶಿಷ್ಯವರ್ಗವನ್ನು ಅವರು ಆಗಲಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…